ಇತ್ತೀಚೆಗೆ ಇ-ಮೇಲಿನಲ್ಲಿ ಸಣ್ಣ ಕಥೆಯೊಂದು ಬಂದಿತ್ತು. ಅದು ಹೀಗಿದೆ. ಒಬ್ಬ ಹುಡುಗ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಆಫೀಸ್ ಬಾಯ್ ಕೆಲಸ ಕೇಳಿಕೊಂಡು ಹೋಗಿರುತ್ತಾನೆ. ಅಲ್ಲಿನ admin ಇವನನ್ನು ಸಂದರ್ಶನ ಮಾಡಿ ಇವನು ಕೆಲಸಕ್ಕೆ ಲಾಯಕ್ಕಿದ್ದಾನೆ ಎಂದು ತೀರ್ಮಾನಿಸುತ್ತಾನೆ. ಅನಂತರ ಆ ಹುಡುಗನ ಹತ್ತಿರ ನಿನ್ನ ಇ-ಮೇಲ್ ಐಡಿ ಕೊಡು ಅದಕ್ಕೊಂದು ಅರ್ಜಿ ಕಳಿಸುತ್ತೇನೆ, ಅದನ್ನು ತುಂಬಿ ಕಳಿಸಿದ ಮೇಲೆ ನಿನಗೆ ಅಪಾಯಿಟ್ಮೆಂಟ್ ಲೆಟರ್ ಕಳಿಸುತ್ತೇನೆ ಅದರ ಪ್ರಿಂಟ್ ತೆಗೆದುಕೊಂಡು ಬಂದು ನೀನು ಇಲ್ಲಿ ಸೇರಿಕೊಳ್ಳಬಹುದು ಎನ್ನುತ್ತಾನೆ. ಆಗ ಆ ಹುಡುಗ "ನನಗೆ ಯಾವುದೇ ಇಮೇಲ್ ಐಡಿ ಇಲ್ಲ ಮತ್ತು ನನಗೆ ಇಂಟರ್ನೆಟ್ ಬಳಕೆಯೂ ಗೊತ್ತಿಲ್ಲ" ಎನ್ನುತ್ತಾನೆ. ಆಗ ಆ ಅಡ್ಮಿನ್ ಈ ಕಾಲದಲ್ಲಿ ಇಮೇಲ್ ಐಡಿ ಇಲ್ಲ ಎಂದ ಮೇಲೆ ನಿನ್ನ ಅಸ್ತಿತ್ವಕ್ಕೇ ಬೆಲೆಯೇ ಇಲ್ಲ ನೀನು ಇಲ್ಲಿ ಕೆಲಸ ಮಾಡಲು ನಾಲಾಯಕ್ ಎಂದು ಬೈದು ಓಡಿಸುತ್ತಾನೆ. ಏನು ಮಾಡುವುದು ಎಂದು ತಿಳಿಯದೇ ಹುಡುಗ ಹೊರಗೆ ಬಂದು ಸ್ವಲ್ಪ ಹೊತ್ತು ಯೋಚಿಸುತ್ತಾನೆ. ಅವನ ಜೇಬಿನಲ್ಲಿ ೫೦ ರೂಪಾಯಿ ಮಾತ್ರ ಇರುತ್ತದೆ. ಅದು ಇನ್ನು ಒಂದು ದಿನಕ್ಕೆ ಸಾಕು. ಆಮೇಲೆ ಹೇಗೆ ಎಂದು ಯೋಚಿಸಿ ಒಂದು ತೀರ್ಮಾನಕ್ಕೆ ಬಂದು ಸೀದ ಟೊಮ್ಯಾಟೋ ಮಾರುಕಟ್ಟೆಗೆ ಹೋಗಿ ೧೦ ಕೆ.ಜಿ ಟೊಮ್ಯಾಟೋ ಕೊಂಡು ಅದನ್ನು ಮನೆ ಮನೆಗೆ ಮಾರುತ್ತಾನೆ. ಲಾಭ ಮಾಡಿಕೊಳ್ಳುತ್ತಾನೆ, ಹೀಗೆ ಮಾರನೇ ದಿನ ಇನ್ನೂ ಹೆಚ್ಚು ಮಾರಿ ಇನ್ನೂ ಹೆಚ್ಚಿನ ಲಾಭ ಬರುತ್ತದೆ. ಹೀಗೆಯೇ ನಿಷ್ಠೆಯಿಂದ ದುಡಿದು ಒಳ್ಳೆಯ ಲಾಭದಿಂದ ಅವನೇ ಒಂದು ತಳ್ಳುಗಾಡಿ ತೆಗೆದುಕೊಳ್ಳುತ್ತಾನೆ, ಅನಂತರ ಒಂದು ಲಗ್ಗೇಜ್ ಆಟೋ, ಟ್ರಕ್ ಹೀಗೆ ಮುಂದುವರೆಯುತ್ತಾ ಹೋಗಿ ಬೇರೆ ಬೇರೆ ವ್ಯಾಪಾರಗಳಲ್ಲೂ ತೊಡಗಿ ೫ ವರ್ಷಗಳ ನಂತರ ಆ ಊರಿನ ಪ್ರಮುಖ ವ್ಯಾಪಾರಿಗಳಲ್ಲಿ ಒಬ್ಬನಾಗುತ್ತಾನೆ. ಒಂದು ದಿನ ಅವನಿಗೆ ತನ್ನ ಕುಟುಂಬಕ್ಕೆ ವಿಮೆ ಮಾಡಿಸಬೇಕು ಎಂಬ ಯೋಚನೆ ಬಂದು ವಿಮಾ ಏಜೆಂಟೊಬ್ಬನನ್ನು ಮನೆಗೆ ಕರೆಯುತ್ತಾನೆ. ಅರ್ಜಿ ಎಲ್ಲ ತುಂಬಿ ಆದ ಮೇಲೆ ಆ ಏಜೆಂಟ್ ಇದ್ದವನು ನಿಮ್ಮ ಇಮೇಲ್ ಐಡಿ ಕೊಡಿ ಎಂದು ಕೇಳಿದಾಗ ನನಗೆ ಯಾವ ಇಮೇಲ್ ಐಡಿಯೂ ಇಲ್ಲ, ನೆಟ್ ಬಳಕೆಯೂ ಗೊತ್ತಿಲ್ಲ ಎನ್ನುತ್ತಾನೆ. ಆಗ ವಿಮಾ ಏಜೆಂಟನು ನೀವು ಇಷ್ಟು ದೊಡ್ಡ ಬಿಸಿನೆಸ್ ಮನ್ ಆಗಿ ಒಂದು ಇಮೇಲ್ ಐಡಿ ಇರದೇ ಇರುವುದು ಆಶ್ಚರ್ಯ, ಆದರೂ ಇಷ್ಟು ಯಶಸ್ವಿಯಾಗಿದ್ದೀರಿ, ಇನ್ನು ನಿಮಗೆ ಇಂಟರ್ನೆಟ್ ಬಳಕೆ ಗೊತ್ತಿದ್ದರೆ ಇನ್ನೂ ಏನಾಗುತ್ತಿದ್ದಿರಿ ಎನ್ನುತ್ತಾನೆ. ಆಗ ಅವನು ನಿಟ್ಟುಸಿರಿಟ್ಟು "ದುರದೃಷ್ಟಕ್ಕೆ ನಾನು ಇಮೇಲ್ ಐಡಿಯೊಂದನ್ನು ಮಾಡಿಕೊಂಡಿದ್ದರೆ ಇವತ್ತು ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಆಫೀಸ್ ಬಾಯ್ ಆಗಿರುತ್ತಿದ್ದೆ" ಎನ್ನುತ್ತಾನೆ.
ಈ ಕತೆಯನ್ನು ಯಾವುದೇ ಉದ್ದೇಶಕ್ಕೆ ಬರೆದಿರಬಹುದು. ಆದರೆ ಇದು ಬಿಂಬಿಸುವುದು ಒಬ್ಬ ಉದ್ಯಮಿ ಹುಟ್ಟುವ ಅಂಶವನ್ನು. ಒಬ್ಬ ಸಾಮಾನ್ಯ ಮನುಷ್ಯ ಉದ್ಯಮಿಯಾಗಿ, ಮಾಲೀಕನಾಗಿ ಬೆಳೆಯಲು ಕಾರಣಗಳನ್ನು, ಪರಿಸ್ಥಿತಿಗಳನ್ನು ಈ ಕತೆಗಳು ಸೂಕ್ಷ್ಮವಾಗಿ ತಿಳಿಸಿಕೊಡುತ್ತವೆ. ಉದ್ಯಮಿ ಎಂದ ಮಾತ್ರಕ್ಕೆ ಟಾಟಾ, ಬಿರ್ಲಾ, ನೀಲೇಕಣಿ, ನಾಣಿಗಳೇ ಆಗಬೇಕಂತಿಲ್ಲ. ಇವತ್ತು ನಮ್ಮ ಸುತ್ತಮುತ್ತಲೇ ಇರುವ ಸಾವಿರಾರು ವ್ಯಾಪಾರಸ್ಥರೂ, ಬಗೆಬಗೆಯ ಬಿಸಿನೆಸ್ ಗಳನ್ನು ನೆಡೆಸುತ್ತಿರುವವರೂ ಕೂಡ ಉದ್ಯಮಿಗಳೇ. ತಂದೆಯಿಂದ ಬಂದ ಬಿಸಿನೆಸ್ ಅನ್ನು ಮುಂದುವರೆಸಿಕೊಂಡು ಹೋಗುತ್ತಿರುವ ಕೆಲವೇ ಕೆಲವರನ್ನು ಹೊರತುಪಡಿಸಿದರೆ ಎಲ್ಲರೂ ಕೂಡ ಒಬ್ಬ ಉದ್ಯಮಿಯಾಗಿ ರೂಪುಗೊಳ್ಳಲು ಕಾರಣ ಒಂದಲ್ಲಾ ಒಂದು ರೀತಿಯ ಪರಿಸ್ಥಿತಿಯೇ ಕಾರಣವಾಗಿರುತ್ತದೆ ಮತ್ತು ಮುಖ್ಯವಾಗಿ ಅವರಲ್ಲಿರುವ ರಿಸ್ಕ್ ತೆಗೆದುಕೊಂಡು ಮುನ್ನುಗ್ಗಿರುವ ಗುಣ ಕಾರಣವಾಗಿರುತ್ತದೆ. ಈ ರೀತಿಯ ಪರಿಸ್ಥಿತಿಗೆ, ರಿಸ್ಕ್ ತೆಗೆದುಕೊಂಡು ಬೆಳೆದಿರುವುದಕ್ಕೆ ಕೆಲವೊಮ್ಮೆ ಅನಿವಾರ್ಯ ಕಾರಣಗಳಿರಬಹುದು ಅಥವಾ ಛಲದಿಂದ ಆಗಿರಬಹುದು. ನನ್ನ ಗೆಳೆಯನೊಬ್ಬ ಕೆಲಸ ಮಾಡುವ ಕಂಪನಿಯ ಮುಖ್ಯಸ್ಥರ ಜೊತೆ ಮಾತನಾಡುವ ಅವಕಾಶ ಸಿಕ್ಕಿತ್ತು. ವರ್ಷಕ್ಕೆ ಕೋಟ್ಯಂತರ ರೂಪಾಯಿಗಳ ಆದಾಯವಿರುವ ಅವರು ತಾವು ಉದ್ಯಮಿಯಾಗಿ ಬೆಳೆದಿದ್ದರ ಬಗ್ಗೆ ಹೇಳಿದರು. "ನಾನು ಬಿ.ಕಾಂ. ಜಸ್ಟ್ ಪಾಸಾಗಿ ಯಾವುದೋ ಒಂದು ಕಂಪನಿಯಲ್ಲಿ ಸಣ್ಣ ಸಂಬಳವೊಂದಕ್ಕೆ ಕೆಲಸಕ್ಕೆ ಸೇರಿಕೊಂಡೆ, ಮುಂದೆ ಓದುವ ಅನುಕೂಲ ಇರಲಿಲ್ಲ, ಎಲ್ಲರೂ ನನ್ನನ್ನು ಆಗ ವೇಸ್ಟ್ ಎಂದು, ಇವನ ಕೈಯಲ್ಲಿ ಏನೂ ಆಗುವುದಿಲ್ಲವೆಂದೂ ದೂಷಿಸುತ್ತಿದ್ದರು, ಅವಮಾನದಿಂದ ಕುಗ್ಗಿಹೋಗುತ್ತಿದ್ದೆ, ಆದರೆ ಹಾಗೆಯೇ ಒಂದೊಂದಾಗಿ ಅನುಭವಗಳನ್ನು ಪಡೆದುಕೊಂಡು ಒಮ್ಮೆ ಅವಕಾಶ ಸಿಕ್ಕಾಗ ರಿಸ್ಕ್ ತೆಗೆದುಕೊಂಡು ನುಗ್ಗಿಬಿಟ್ಟೆ, ಮೊದಲ ದಿನಗಳಲ್ಲಿ ಬಹಳ ಕಷ್ಟವಾದರೂ ಆನಂತರ ನಾ ನೆಡೆದದ್ದೇ ಹಾದಿಯಾಯಿತು, ಇವತ್ತು ಈ ಮಟ್ಟಿಗೆ ಬೆಳೆದಿದ್ದೇನೆ, ಕೋಟಿರೂಪಾಯಿಗೆ ತೂಗುತ್ತೇನೆ ಎಂದು ಹೇಳಿಕೊಳ್ಳಲು ನನಗ್ಯಾವ ಅಹಂಕಾರವೂ ಇಲ್ಲ , ಸಂಕೋಚವೂ ಇಲ್ಲ. ಆದರೆ ಅವತ್ತು ನನ್ನನ್ನು ಹೀಯಾಳಿಸಿದವರು ಯಾವ ಸ್ಥಿತಿಯಲ್ಲಿದ್ದಾರೋ ಅದೇ ಸ್ಥಿತಿಯಲ್ಲಿದ್ದಾರೆ". ಹೀಗೆ ಹೇಳಿದ ಅವರು ನೆಡೆಸುತ್ತಿರುವುದು ತಾವು ಓದಿದ್ದಕ್ಕೆ ಸ್ವಲ್ಪವೂ ಸಂಬಂಧವಿಲ್ಲದ ಟ್ರಾನ್ಸ್ ಫಾರ್ಮರ್ ತಯಾರಿಕಾ ಕಾರ್ಖಾನೆ! ಇವೆಲ್ಲವನ್ನೂ ಸುಮ್ಮನೇ ಅವಲೋಕಿಸಿದಾಗ ಸದ್ಯದ ಸಮಾಜದಲ್ಲಿ ಹೆಚ್ಚು ಹೆಚ್ಚು ಓದಿರುವರಿಗಿಂತಲೂ ಕಡಿಮೆ ಓದಿದವರೇ ಉದ್ಯಮಿಗಳಾಗಿರುವ ಉದಾಹರಣೆ ಬಹಳ. ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಸಾವಿರಾರು ಕೈಗಾರಿಕೆಗಳು ಇದಕ್ಕೆ ಒಳ್ಳೆಯ ಉದಾಹರಣೆಗಳು. ಇಲ್ಲಿ ತುಂಬ ಕಡಿಮೆ ಓದಿದವರು, ಯಾವುದೇ ವಿಶೇಷ, ವೃತ್ತಿಪರ ಕೋರ್ಸುಗಳನ್ನು ಮಾಡದೇ ಇರುವವರು ಇವತ್ತು ಉದ್ಯಮಿಗಳಾಗಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದಾರೆ. ಎಲ್ಲ ಉದ್ಯಮಿಗಳನ್ನು ಕೇಳಿದರೂ ಕೂಡ ಅವರದ್ದೆಲ್ಲಾ ಸಾಮಾನ್ಯವಾಗಿ ಒಂದೇ ಉತ್ತರವಿರುತ್ತದೆ. ಈ ಮಟ್ಟಿಗೆ ಅವರು ಬೆಳೆಯಲು ಕಾರಣ ಅನಿವಾರ್ಯತೆ, ಅನುಭವ, ಪೂರಕ ಪರಿಸ್ಥಿತಿ, ಅದೃಷ್ಟ ಹಾಗೂ ಅದಕ್ಕೆ ತಕ್ಕುನಾದ, ಸರಿಯಾಗಿ ಬಳಸಿಕೊಂಡ ಶ್ರಮ. ಇನ್ಫೋಸಿಸ್ ನ ನಂದನ್ ನೀಲೇಕಣಿಯವರೂ ಕೂಡ ತಾವು ಬರೆದಿರುವ ಪುಸ್ತಕದಲ್ಲಿ ತಮ್ಮನ್ನು ’ಆಕಸ್ಮಿಕ ಉದ್ಯಮಿ’ ಎಂದೇ ಕರೆದುಕೊಳ್ಳುತ್ತಾರೆ.
ಇದಕ್ಕೆ ಉಲ್ಟಾ ಪರಿಸ್ಥಿತಿ ಎಂದರೆ ಇವತ್ತಿನ ವಿದ್ಯಾವಂತರದ್ದು. ಇವತ್ತು ಮಾರುಕಟ್ಟೆಯಲ್ಲಿ ಹಲವು ಕೋರ್ಸುಗಳಿವೆ. ಮ್ಯಾನೇಜ್ ಮೆಂಟ್ ಕೋರ್ಸುಗಳಿವೆ. ಆದರೆ ಅದರಲ್ಲಿ ತಯಾರಾಗಿ ಬರುತ್ತಿರುವ ವಿದ್ಯಾವಂತರಲ್ಲಿ ಈ ಉದ್ಯಮಿ ಗುಣಗಳೇ(enterpreneurship qualities) ಕಂಡುಬರುತ್ತಿಲ್ಲ ಎನ್ನುವುದು ಕಟು ಸತ್ಯ. ಅವೆಲ್ಲವೂ ಹೆಚ್ಚೆಂದರೆ ಮೆನೇಜರ್ ಗಳನ್ನು ತಯಾರು ಮಾಡುತ್ತಿವೆಯೇ ಹೊರತು Entrepreneur ಗಳನ್ನಲ್ಲ. ಇವತ್ತು ವಾಣಿಜ್ಯ, ಕಲೆ, ಎಂಜಿನಿಯರಿಂಗ್ ಎಲ್ಲಾ ಕೋರ್ಸ್ ಗಳಲ್ಲೂ ಕೂಡ managementಬಗ್ಗೆ, Entrepreneurship ಬಗ್ಗೆ ಪಠ್ಯಗಳಿವೆ. ಆದರೆ ಅವು ಕೇವಲ ಥಿಯರಿಗಳಾಗೇ ಉಳಿಯುತ್ತಿರುವುದು ವಿಪರ್ಯಾಸ. ಈ ಥಿಯರಿಗಳನ್ನು ಓದಿಕೊಂಡು ಬಂದ ಯುವಕ ಯುವತಿಯರು ಯಾವುದೋ ಕಂಪನಿಯಲ್ಲಿ ಅಥವಾ ಮತ್ತೆಲ್ಲೋ ಒಬ್ಬ ಸಾಮಾನ್ಯ ಉದ್ಯೋಗಿಯಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟುಬಿಡುತ್ತಾರೆ. ಅದಕ್ಕೆ ಕಾರಣ ಆಕರ್ಷಕ ಸಂಬಳ, ಸವಲತ್ತುಗಳು ಹಲವಿರಬಹುದು. ಆದರೆ ಇಲ್ಲಿ ಪ್ರಶ್ನೆಯೆಂದರೆ ವಿದ್ಯೆ ಎನ್ನುವುದು ಅವನನ್ನು ಆ ಔದ್ಯಮಿಕತೆಯಿಂದ ದೂರ ಇಡುತ್ತಿದೆಯೇ ಎಂಬುದು. ದೊಡ್ಡ ದೊಡ್ಡ ಉದ್ಯಮಿಗಳಾದವರು, ಆಗುವವರು ಮ್ಯಾನೇಜ್ ಮೆಂಟ್ ಬಗ್ಗೆಯಾಗಲೀ, ಔದ್ಯಮಿಕತೆ ಬಗ್ಗೆಯಾಗಲೀ ಯಾವುದೇ ಪುಸ್ತಕಗಳನ್ನು ಓದಿರುವುದಿಲ್ಲ, ಯಾವುದೇ ಪದವಿ ಪಡೆದಿರುವುದಿಲ್ಲ. ಆದರೆ ಪುಸ್ತಕ ಓದಿದವರು, ಪದವಿ ಪಡೆದವರು ಉದ್ಯಮಿಗಳಾಗುತ್ತಿಲ್ಲ. ೧೦೦% ಈ ಸ್ಥಿತಿ ಇಲ್ಲದಿರಬಹುದು , ಆದರೆ ಬಹುತೇಕ ಈ ರೀತಿ ಇದೆ. ಪ್ರಸಕ್ತ ಉದ್ಯಮಿಗಳು ಪುಸ್ತಕ ಓದುತ್ತಾ ಕೂತಿದ್ದರೆ ಖಂಡಿತ ಆ ಮಟ್ಟಿಗೆ ಬೆಳೆಯಲೂ ಸಾಧ್ಯವಾಗುತ್ತಿರಲಿಲ್ಲ. ಎಲ್ಲರಂತೆ ಅವರೂ ಕೂಡ ಸಾಮಾನ್ಯ ನೌಕರರಾಗಿಬಿಡುತ್ತಿದ್ದರೆನೋ! stay hungry, stay foolish ಎನ್ನುವ ಪುಸ್ತಕವೊಂದಿದೆ. ನಮ್ಮ ದೇಶದ ದೊಡ್ಡ ದೊಡ್ಡ ಐಐಎಂ ಗಳಲ್ಲಿ ಓದಿದ ಹಲವು ಪದವಿಧರರು ಉದ್ಯಮಿಗಳಾಗಿ ಬೆಳೆದಿರುವ ಯಶೋಗಾಥೆಯ ಕತೆಗಳಿವೆ. ಆದರೆ ಪ್ರತಿವರ್ಷ ಹೊರಬರುವ ಪದವೀಧರರ ಸಂಖ್ಯೆಗೆ ಹೋಲಿಸಿದರೆ ಉದ್ಯಮಿಗಳಾದವರ ಸಂಖ್ಯೆ ತೀರಾ ಕಡಿಮೆ ಇದೆ. ಇದು ಹೇಳುವಷ್ಟು ಸುಲಭವಲ್ಲ , ಇದಕ್ಕೆ ಆಸಕ್ತಿಯಿಂದ ಹಿಡಿದು ಬಂಡವಾಳದ ತನಕ ಹಲವಾರು constraintಗಳಿವೆ ನಿಜ. ಆದರೂ ಕೂಡ ತುಲನಾತ್ಮಕವಾಗಿ ನಮ್ಮ ದೇಶದಲ್ಲಿ ಔದ್ಯಮಿಕತೆ ಎಂಬುದಕ್ಕೆ ವಿದ್ಯೆಯೇ constraint ಆಗುತ್ತಿದೆಯೇ ಎಂಬ ಅನುಮಾನ ಸಹಜವೆನಿಸುತ್ತದೆ. ಅದು ಯುವಜನಾಂಗವನ್ನು ಕಣ್ಣು ಕಟ್ಟಿದ ಕುದುರೆಯಂತೆ ಒಂದೇ ದಿಕ್ಕಿನಲ್ಲಿ ಯೋಚಿಸುವಂತೆ ಮಾಡುತ್ತಿದೆ. ಇವತ್ತು ಜಗತ್ತಿನಲ್ಲಿ ದೊಡ್ಡ ದೊಡ್ಡ ಉದ್ಯಮಗಳನ್ನು ಕಟ್ಟಿ ಬೆಳೆಸಿದ, ಹೆಸರು ಮಾಡಿರುವ, ಸಾಧನೆ ಮಾಡಿರುವ ಬಹುತೇಕ ಜನರು ಹೆಚ್ಚು ಓದಿರದಂತವರೇ ಆಗಿದ್ದಾರೆ. ಹೆಚ್ಚು ಓದಿದವರು, ಪದವಿ ಪಡೆದವರು ಯಾವುದೋ ಕಂಪನಿ ಕೆಲಸಗಳಲ್ಲಿ ತೊಡಗಿಕೊಂಡರೆ ದೊಡ್ಡಸ್ತಿಕೆ ಎಂಬ ಸಾಮಾಜಿಕ ಅಂಶವೂ ಕೂಡ ಅವರನ್ನು ಹಿಡಿದಿಡುತ್ತಿದೆ. ಹಾಗೆಂದು ಹೆಚ್ಚಿನ ವಿದ್ಯೆಯಿಲ್ಲದೇ ಕೂರುವುದು, ಓದದಿರುವುದು ಮೂರ್ಖತನವಾಗುತ್ತದೆ. ಆದ್ದರಿಂದ ಈ ನಿಟ್ಟಿನಲ್ಲಿ ವಿದ್ಯೆಯ ಜೊತೆಜೊತೆಗೆ ಬೇರುಮಟ್ಟದ ಚಿಂತನೆಗಳನ್ನು ವಿದ್ಯಾವಂತ ಯುವಕರಲ್ಲಿ ಬೆಳೆಸುವ ಅಗತ್ಯವಿದೆ. ಉದ್ಯಮಿಯಾಗಲು ಇರುವ ಅವಕಾಶಗಳು, ಸೌಲಭ್ಯಗಳು, ಜಾಗತಿಕ ಮಾರುಕಟ್ಟೆಗಿಂತ ಹೆಚ್ಚಾಗಿ ನಮ್ಮ ದೇಶದ ಹಾಗೂ ನಮ್ಮ ಸುತ್ತಲಿನ ಸಾಮಾನ್ಯ ಮಾರುಕಟ್ಟೆಯ ಬಗೆಗಿನ ಅರಿವು ಮುಖ್ಯವಾಗಿ ಬೇಕಾಗಿದೆ.
ಇದರಲ್ಲಿ ಯಾವುದೂ conclusion ಅಲ್ಲ, ಸುಮ್ಮನೇ ಯೋಚನೆಯನ್ನು ಹಂಚಿಕೊಂಡದ್ದಷ್ಟೆ.
Monday, July 06, 2009
Tuesday, June 30, 2009
ಕನಸು ಬಿತ್ತು
ನನಗೊಂದು ಕನಸು ಬಿತ್ತು
ಅದರಲ್ಲಿ ನಾ ಅಳಿಲಾಗಿದ್ದೆ
ದಿಕ್ಕೇ ಇಲ್ಲದೆ ಓಡುತ್ತಿದ್ದೆ
ಮರದ ತುದಿಯವರೆಗೂ ಹತ್ತಿದ್ದೆ
ಮತ್ತೊಂದು ಕನಸು ಬಿತ್ತು
ಮನೆ ಅಂಗಳದ ತುಂಬೆಲ್ಲಾ ಹಾವುಗಳು
ಬಾಲದ ಮೇಲೆ ನಿಂತು ಕುಣಿಯುತ್ತಿದ್ದವು
ಮಧ್ಯದ ಕರಿನಾಗರ ನನ್ನನ್ನೇ ನೋಡುತ್ತಿತ್ತು
ಅಳಿಲು ಓಡುತ್ತಾ ಗುಂಡಿಯಲ್ಲಿ ಬಿತ್ತು
ಕರಿನಾಗರವ ಕಂಡು ದಿಗಿಲಾಗಿತ್ತು
ಅಳಿಲಿನ ಸ್ವಪ್ನ ಅಪರೂಪವಂತೆ
ಹಾವಿನ ಸ್ವಪ್ನ ಶುಭಸೂಚಕವಂತೆ !
ವಿ.ಸೂ : ಇದನ್ನು ಕವನವೆಂದು ತಪ್ಪು ತಿಳಿಯಬಾರದು. :)
ಅದರಲ್ಲಿ ನಾ ಅಳಿಲಾಗಿದ್ದೆ
ದಿಕ್ಕೇ ಇಲ್ಲದೆ ಓಡುತ್ತಿದ್ದೆ
ಮರದ ತುದಿಯವರೆಗೂ ಹತ್ತಿದ್ದೆ
ಮತ್ತೊಂದು ಕನಸು ಬಿತ್ತು
ಮನೆ ಅಂಗಳದ ತುಂಬೆಲ್ಲಾ ಹಾವುಗಳು
ಬಾಲದ ಮೇಲೆ ನಿಂತು ಕುಣಿಯುತ್ತಿದ್ದವು
ಮಧ್ಯದ ಕರಿನಾಗರ ನನ್ನನ್ನೇ ನೋಡುತ್ತಿತ್ತು
ಅಳಿಲು ಓಡುತ್ತಾ ಗುಂಡಿಯಲ್ಲಿ ಬಿತ್ತು
ಕರಿನಾಗರವ ಕಂಡು ದಿಗಿಲಾಗಿತ್ತು
ಅಳಿಲಿನ ಸ್ವಪ್ನ ಅಪರೂಪವಂತೆ
ಹಾವಿನ ಸ್ವಪ್ನ ಶುಭಸೂಚಕವಂತೆ !
ವಿ.ಸೂ : ಇದನ್ನು ಕವನವೆಂದು ತಪ್ಪು ತಿಳಿಯಬಾರದು. :)
Thursday, June 25, 2009
ನನಗಂತೂ ಅನಿಸಿದೆ !
ನಿನಗೆ ಅನ್ನಿಸಿದೆಯೋ ಗೊತ್ತಿಲ್ಲ. ನನಗಂತೂ ಅನಿಸಿದೆ. ಉಹುಂ, ಬಿಡುವಿದ್ದಾಗ ಪ್ರೀತಿಸುವುದು ಪ್ರೀತಿಯಲ್ಲ. ಹೋಗಲಿ ಇಲ್ಲಿ ಪ್ರೀತಿ ವಿಷಯ ಬೇಡ. ಬಿಡುವಿದ್ದಾಗ ಮಾತ್ರ ಇರುವುದು ಸ್ನೇಹವಲ್ಲ. ಗೆಳೆತನದಲ್ಲಿ ಬಂದಾಗ ಭರಿಸಿಕೋ ಎನ್ನುವುದು ತರವಲ್ಲ. ನದಿಯು ಸಮುದ್ರವನ್ನು ಸೇರುವಲ್ಲಿನ ಮೇಲ್ಮೈ ಪ್ರಶಾಂತತೆಯನ್ನು ನೀನು ನಿರ್ಲಿಪ್ತತೆ ಎನ್ನುವುದಾದರೆ ನಿನಗೆ ಒಳಗಿನ ಚಕ್ರಸುಳಿಗಳ ಅರಿವಿಲ್ಲ. ಆಚೆಯ ದಡದ ಭೋರ್ಗರೆಯುತ್ತಿರುವ ಅಲೆಗಳು ಕಾಣುತ್ತಿಲ್ಲ. ಏಕೆಂದರೆ ಈ ದಡದಲ್ಲೇ ಮಲಗಿಬಿಟ್ಟೆ ನೀನು. ಎಚ್ಚರಗೊಳಿಸುವ ಗೋಜಿಗೆ ಸಮಯ ಕಳೆದುಹೋದಾಗ ಅದು ಸಾಯುವ ಸ್ಥಿತಿ ತಲುಪಿತ್ತು. ಮಳೆಗಾಲದಲ್ಲಿ ಮಾತ್ರ ತುಂಬಿ ಹರಿದುದ್ದನ್ನು ನದಿ ಎಂದುಕೊಂಡೆನೋ ಎಂದು ಬೇಸರವಾಗುತ್ತಿದೆ. ಬೇಸಿಗೆ ಸೃಷ್ಟಿಸಿದ ಬರದ ಗಾಳಿಗೆ ಹರಿವಿನ ಪಾತ್ರವೂ ಮುಚ್ಚಿಹೋಗುತ್ತಿದೆ. ಸಂಬಂಧಗಳು ಅಸಡ್ಡೆ, ನಿರ್ಲಕ್ಷದ ಹೊರತಾಗಿ ಕೆಲವೇ ಕೆಲವು ಸಣ್ಣ ಸೂಚನೆಯನ್ನಾದರೂ ಉಳಿಸುತ್ತವೆ. ಮತ್ತೆ ಮಳೆ ಹನಿಯುವುದಾ ನದಿ ತುಂಬಿ ಹರಿಯುವುದಾ ಪ್ರಶ್ನೆ ಕೇಳಿಕೊಳ್ಳಲೂ ಮನಸಾಗುತ್ತಿಲ್ಲ. ಮೋಡ ಕಟ್ಟುವ ಸುಳಿವೇ ಇಲ್ಲ. ಹನಿ ಹನಿಗೂ ಗೋಗರೆಯುವದರಲ್ಲಿ ಅರ್ಥವಿಲ್ಲ. ಪರಸ್ಪರ ತತ್ವಕ್ಕೆ ಬೆಲೆಯಿಲ್ಲದ ಕಡೆ ಬೆಲೆ ಕೊಟ್ಟು ಕೊಟ್ಟು ಈಗಿನ ಆಬದಿಯ ನಿರಾಳತೆ ಕಂಡು ದಂಗಾಗಿದ್ದೇನೆ. ಗುದ್ದಿದ್ದು ಸಮಾಧಾನವಾಗಿಲ್ಲ, ಆದರೆ ಬೆನ್ನು ತಿರುಗಿಸಿ ಹೋದ ಬೆನ್ನಿನ ಹಿಂದೆ ಬಿದ್ದು ಅಭ್ಯಾಸವಿಲ್ಲ. ಬಲವಂತದ ಬಳ್ಳಿಯಾಗಿ ಸುತ್ತಿಕೊಂಡಿದ್ದ ವಿಷಾದ ಭಾವ. ಎಲ್ಲವನ್ನೂ ನಿರ್ಧರಿಸಿ ಆಗಿರುವಾಗ ಮತ್ತೇನು ಹೇಳುವುದು ಫಲವಿಲ್ಲ ಎಂದು ನುಣುಚಿಕೊಂಡೆಯಾ? ಕೆಲವೊಂದು ಸಂದರ್ಭಗಳಲ್ಲಿ ಯಾವ ನಿರ್ಧಾರವನ್ನು ತೆಗೆದುಕೊಳ್ಳದೇ ಇರುವುದೇ ಒಳ್ಳೆಯ ನಿರ್ಧಾರವೆನ್ನುತ್ತಾರೆ. ಅದೇ ರೀತಿ ನಾನೂ ಕೂಡ ಯಾವ ನಿರ್ಧಾರವನ್ನೂ ತೆಗೆದುಕೊಳ್ಳಬಾರದೆಂದು ನಿರ್ಧರಿಸಿದ್ದೆ. ಆದರೆ ಈಗ ಏನಾದರೊಂದು ನಿರ್ಧರಿಸಿಬಿಡಬೇಕು ಎಂಬ ನಿರ್ಧಾರಕ್ಕೆ ಬರೋಣವೆನಿಸುತ್ತಿದೆ. ನೀ ಕೊಟ್ಟ ಎರಡು ರೂಪಾಯಿ ನಾಣ್ಯ ಪರ್ಸಿನ ಒಳಖಾನೆಯಲ್ಲಿ ಹಾಗೇ ಇದೆ. ಅದಕ್ಕೆ ಇನ್ನೆರಡೂವರೆ ರೂಪಾಯಿ ಸೇರಿಸಿದರೆ ಅದು ನನ್ನೆದೆಯ ದಹಿಸಿ, ಭಾರ ಇಳಿಸಿ, ಬೂದಿಯಾಗುತ್ತದೆ. ನಾ ಅಂತವನೇನಲ್ಲ!
Thursday, May 21, 2009
ಆರ್ಕುಟ್ ಮದುವೆ !
ಆರ್ಕುಟ್ ನಲ್ಲಿ ಇವನು ಅವಳ ಪ್ರೊಫೈಲ್ ನೋಡುವುದು , ಅವಳು ಇವನ ಪ್ರೊಫೈಲ್ ನೋಡುವುದು... recent visitors ಪಟ್ಟಿಯಲ್ಲಿ ದಿನವೂ ಹೆಸರು ಕಾಣುತ್ತಿತ್ತು. ಹೀಗೆ ಮೂರು ತಿಂಗಳು ನಡೆಯಿತು. ಅಷ್ಟರಲ್ಲಿ ಹೊಸ ವರ್ಷ ಬಂದಿತ್ತು. ಕೊನೆಗೆ ಹುಡುಗ ಒಂದು ಸ್ಕ್ರಾಪ್ ಹಾಕಿಯೇ ಬಿಟ್ಟ, "ಹೊಸ ವರ್ಷದ ಶುಭಾಶಯಗಳು". ತಕ್ಷಣವೇ ಉತ್ತರ ಬಂದಿತ್ತು ಹುಡುಗಿಯಿಂದ - "ಅಂತು ಇಷ್ಟು ದಿನಗಳಾದ ಮೇಲೆ ಸ್ಕ್ರಾಪ್ ಹಾಕಿದ್ರಲ್ಲ ". ಮುಂದುವರೆಯಿತು ಮಾತು ಕತೆ. ಮಾತಿಂದ ಪರಿಚಯ...., ಭೇಟಿ...., ಇಷ್ಟ...., ಸ್ನೇಹ, ಸ್ನೇಹದಿಂದ ಪ್ರೀತಿ.....
ಎಷ್ಟು ದಿನ ಅಂತ ಬರೀ ಪ್ರೀತಿ ಮಾಡಿಕೊಂಡಿರಲು ಸಾಧ್ಯ ? ವರ್ಷಕ್ಕಿಂತಲೂ ಹಳೆಯ ಪ್ರೀತಿ ಪೂರ್ತಿ ಮಾಗಿತ್ತು . ಯಾವುದೇ ಆತುರಕ್ಕೆ ಬೀಳದೆ ಇಬ್ಬರೂ ಒಬ್ಬರಿಗೊಬ್ಬರು ಎಲ್ಲಾ ರೀತಿಯಲ್ಲೂ ಸಂಪೂರ್ಣ ಒಪ್ಪಿಗೆಯಾದ ನಂತರವೇ ಬದುಕಿನಲ್ಲೂ ಜೊತೆಯಾಗುವ ನಿರ್ಧಾರ ಮಾಡಿದರು. As usual ಸ್ವಲ್ಪ ಜಗ್ಗಾಟದ ನಂತರ ಹಿರಿಯರ ಒಪ್ಪಿಗೆಯೂ ದೊರೆಯಿತು. ದೊರೆಯಲೇಬೇಕಿತ್ತು !
ಮೊನ್ನೆ ಮೊನ್ನೆ ಗೆಳೆಯನ ಮದುವೆ ಆಯಿತು. ಯಾಕೋ ಟೆನ್ಶನ್ ಆಗ್ತಿದೆ ಕಣ್ರೋ ಅಂತ ಮದುವೆ ಹಿಂದಿನ ದಿನದವರೆಗೂ ಅಲವತ್ತುಕೊಳುತ್ತಿದ್ದ. ಹನಿಮೂನಿಗೆ ಎಲ್ಲಿಗೆ ಹೋಗೋದು ಅಂತ ಗೊತ್ತಾಗದೆ, ನೀವೆ ಎಲ್ಲಾದ್ರೂ ಬುಕ್ ಮಾಡಿಸಿಕೊಡ್ರೋ ಅಂತ ನಮ್ಮನ್ನು ಕಷ್ಟಕ್ಕೆ ಸಿಲುಕಿಸಿದ್ದ. ಮದುವೆ ದಿನ ಇಷ್ಟಗಲ ನಗು ತೋರಿಸುತ್ತಾ ನಿಂತ ಅವರಿಬ್ಬರ ಸಂಭ್ರಮ ನೋಡುವಂತಿತ್ತು. ಮದುವೆ ಮುಗಿಸಿ ನಾವು ಬೆಂಗಳೂರಿಗೆ ತಿರುಗಿ ಬಂದು ನಾಲ್ಕು ದಿನದ ನಂತರ ಫೋನ್ ಮಾಡಿದರೆ "ಲೋ, ರೋಮಿಂಗ್ ನಲ್ಲಿದಿನಿ , ಸಖತ್ ಛಾರ್ಜ್ ಆಗತ್ತೆ, ಇಡ್ರೋ ಫೋನು" ಅಂತ ದಬಾಯಿಸಿದ್ದ. "ಆಯ್ತು ಬಿಡಪ್ಪಾ, ನಿನ್ ಛಾರ್ಜ್ ಖಾಲಿ ಮಾಡಲ್ಲ, ಬೇಕಾಗತ್ತೆ ನಿಂಗೆ" ಅಂತ ನಾವು ನಗಾಡಿದ್ದೆವು. ಮಧುಚಂದ್ರದಿಂದ ಮರಳಿ ಬಂದು ಈಗ ಟೆನ್ಶನ್ ಫ್ರೀ ಆಗಿದ್ದಾನೆ. :)
ನಮ್ಮೆಲ್ಲಾ ಗೆಳೆಯರ ಪರವಾಗಿ, ನಮ್ಮ ಕಟ್ಟೆ ಬಳಗದ ಪರವಾಗಿ ಅವರಿಬ್ಬರ ಮುಂದಿನ ಜೀವನಕ್ಕೆ ಶುಭಹಾರೈಕೆಗಳು. Happy married lifeu. :-)

ಮುಂದೆ ಈ ರೀತಿ ಸುದ್ದಿಗಳು ಇನ್ನೂ ಜಾಸ್ತಿ ಜಾಸ್ತಿ ಬರುವ ಚಾನ್ಸ್ ಇದೆ. ಅಪ್ಪ ಅಮ್ಮಂದಿರ ಕೆಲಸ ಕಮ್ಮಿ ಮಾಡುತ್ತಿರೋ ಸೋಶಿಯಲ್ ನೆಟ್ವರ್ಕ್ ಸೈಟ್ ಗಳಿಗೆ thanx ಹೇಳಬೇಕೋ ಅಥವಾ ಹುಡುಗ್ರು ದಾರಿ ತಪ್ಪುತ್ತಾ ಇದ್ದಾರೆ ಅಂತ ಆತಂಕ ಪಡಬೇಕೋ ಎಂಬ ತೀರ್ಮಾನ ಅವರಿಗವರಿಗೆ ಬಿಟ್ಟದ್ದು.
ಎಷ್ಟು ದಿನ ಅಂತ ಬರೀ ಪ್ರೀತಿ ಮಾಡಿಕೊಂಡಿರಲು ಸಾಧ್ಯ ? ವರ್ಷಕ್ಕಿಂತಲೂ ಹಳೆಯ ಪ್ರೀತಿ ಪೂರ್ತಿ ಮಾಗಿತ್ತು . ಯಾವುದೇ ಆತುರಕ್ಕೆ ಬೀಳದೆ ಇಬ್ಬರೂ ಒಬ್ಬರಿಗೊಬ್ಬರು ಎಲ್ಲಾ ರೀತಿಯಲ್ಲೂ ಸಂಪೂರ್ಣ ಒಪ್ಪಿಗೆಯಾದ ನಂತರವೇ ಬದುಕಿನಲ್ಲೂ ಜೊತೆಯಾಗುವ ನಿರ್ಧಾರ ಮಾಡಿದರು. As usual ಸ್ವಲ್ಪ ಜಗ್ಗಾಟದ ನಂತರ ಹಿರಿಯರ ಒಪ್ಪಿಗೆಯೂ ದೊರೆಯಿತು. ದೊರೆಯಲೇಬೇಕಿತ್ತು !
ಮೊನ್ನೆ ಮೊನ್ನೆ ಗೆಳೆಯನ ಮದುವೆ ಆಯಿತು. ಯಾಕೋ ಟೆನ್ಶನ್ ಆಗ್ತಿದೆ ಕಣ್ರೋ ಅಂತ ಮದುವೆ ಹಿಂದಿನ ದಿನದವರೆಗೂ ಅಲವತ್ತುಕೊಳುತ್ತಿದ್ದ. ಹನಿಮೂನಿಗೆ ಎಲ್ಲಿಗೆ ಹೋಗೋದು ಅಂತ ಗೊತ್ತಾಗದೆ, ನೀವೆ ಎಲ್ಲಾದ್ರೂ ಬುಕ್ ಮಾಡಿಸಿಕೊಡ್ರೋ ಅಂತ ನಮ್ಮನ್ನು ಕಷ್ಟಕ್ಕೆ ಸಿಲುಕಿಸಿದ್ದ. ಮದುವೆ ದಿನ ಇಷ್ಟಗಲ ನಗು ತೋರಿಸುತ್ತಾ ನಿಂತ ಅವರಿಬ್ಬರ ಸಂಭ್ರಮ ನೋಡುವಂತಿತ್ತು. ಮದುವೆ ಮುಗಿಸಿ ನಾವು ಬೆಂಗಳೂರಿಗೆ ತಿರುಗಿ ಬಂದು ನಾಲ್ಕು ದಿನದ ನಂತರ ಫೋನ್ ಮಾಡಿದರೆ "ಲೋ, ರೋಮಿಂಗ್ ನಲ್ಲಿದಿನಿ , ಸಖತ್ ಛಾರ್ಜ್ ಆಗತ್ತೆ, ಇಡ್ರೋ ಫೋನು" ಅಂತ ದಬಾಯಿಸಿದ್ದ. "ಆಯ್ತು ಬಿಡಪ್ಪಾ, ನಿನ್ ಛಾರ್ಜ್ ಖಾಲಿ ಮಾಡಲ್ಲ, ಬೇಕಾಗತ್ತೆ ನಿಂಗೆ" ಅಂತ ನಾವು ನಗಾಡಿದ್ದೆವು. ಮಧುಚಂದ್ರದಿಂದ ಮರಳಿ ಬಂದು ಈಗ ಟೆನ್ಶನ್ ಫ್ರೀ ಆಗಿದ್ದಾನೆ. :)
ನಮ್ಮೆಲ್ಲಾ ಗೆಳೆಯರ ಪರವಾಗಿ, ನಮ್ಮ ಕಟ್ಟೆ ಬಳಗದ ಪರವಾಗಿ ಅವರಿಬ್ಬರ ಮುಂದಿನ ಜೀವನಕ್ಕೆ ಶುಭಹಾರೈಕೆಗಳು. Happy married lifeu. :-)

ಮುಂದೆ ಈ ರೀತಿ ಸುದ್ದಿಗಳು ಇನ್ನೂ ಜಾಸ್ತಿ ಜಾಸ್ತಿ ಬರುವ ಚಾನ್ಸ್ ಇದೆ. ಅಪ್ಪ ಅಮ್ಮಂದಿರ ಕೆಲಸ ಕಮ್ಮಿ ಮಾಡುತ್ತಿರೋ ಸೋಶಿಯಲ್ ನೆಟ್ವರ್ಕ್ ಸೈಟ್ ಗಳಿಗೆ thanx ಹೇಳಬೇಕೋ ಅಥವಾ ಹುಡುಗ್ರು ದಾರಿ ತಪ್ಪುತ್ತಾ ಇದ್ದಾರೆ ಅಂತ ಆತಂಕ ಪಡಬೇಕೋ ಎಂಬ ತೀರ್ಮಾನ ಅವರಿಗವರಿಗೆ ಬಿಟ್ಟದ್ದು.
Wednesday, May 13, 2009
ವಿಕಾಸದ ಹಾದಿಯಲ್ಲಿ ೨ ವರ್ಷ!
ಬೇರೆ ಏನೋ ಬರೆದು ಕೊನೆಗೆ ಆ ವಿಷಯಕ್ಕೆ ಬರಲಾ? ಅಥವಾ ಮೊದಲೇ ಆ ವಿಷಯ ಹೇಳಿ ನಂತರ ಮತ್ತೇನೋ ಹೇಳಲಾ? ವಿಷಯದ ಬಗ್ಗೆ ಹೇಳುತ್ತಾ ಜೊತೆಗೆ ವಿಶ್ಲೇಷಣೆ, ಉಪದೇಶ, ನೀತಿಸಂಹಿತೆ, ಸಂಯಮ, ಸುಡುಗಾಡು ಶುಂಠಿ...
ಏನೂ ಬೇಡ. ನೇರವಾಗಿ ವಿಷಯಕ್ಕೇ ಬರುತ್ತೇನೆ. ಇವತ್ತಿಗೆ ಸರಿಯಾಗಿ ನನ್ನ ಈ ಬ್ಲಾಗ್ ಶುರುಮಾಡಿ ೨ ವರ್ಷ ೩ ದಿನ ಆಯಿತು. ಮೊದಲ ವರ್ಷ ಕಳೆದಾಗ 'ವರ್ಷ ಕಳೆಯಿತು' ಎಂದು ಬರೆದಿದ್ದೆ. ಈ ಎರಡು ವರ್ಷ ಕಳೆದಾಗಲೂ '೨ ವರ್ಷ ಕಳೆಯಿತು' ಎನ್ನುವುದಕ್ಕಿಂತ ಹೆಚ್ಚಿನದೇನೂ ಆಗಿಲ್ಲ ಅಂತ ಅನ್ನಿಸಿದರೂ ಒಂದಷ್ಟು ಬದಲಾವಣೆಗಳು ಆಗಿವೆ, ತಿರುವುಗಳು ಕಂಡಿವೆ ಎಂದಷ್ಟೇ ಹೇಳಬಲ್ಲೆ. ಹಲವು ಬಾರಿ ಯಾಕೆ ಬೇಕಾಗಿತ್ತು ಈ ಬ್ಲಾಗ್ ಅನ್ನಿಸಿದೆ. ಮರುಕ್ಷಣವೇ ಇದರಲ್ಲೇ ಖುಷಿ ಅನ್ನಿಸಿದೆ. ಬ್ಲಾಗ್ ಅಂದಾಕ್ಷಣ ಬರಹದ ಜೊತೆ ಓದುಗರೂ ಅಷ್ಟೇ ಮುಖ್ಯ. ಬ್ಲಾಗ್ ಎಂದರೆ ಎಷ್ಟೇ ನಮಗೆ ನಾವು ಬರೆದುಕೊಳ್ಳುವುದು ಅದೂ ಇದೂ ಅಂತ ಏನೇ ಅಂದರೂ ಕೂಡ ಓದುಗರಿಲ್ಲದಿದ್ದಲ್ಲಿ ಡೈರಿಯಲ್ಲಿ ಬರೆದು ಒಳಗೆ ಇಡುವುದಕ್ಕೂ ಇದಕ್ಕೂ ವ್ಯತ್ಯಾಸವಿರುತ್ತಿರಲಿಲ್ಲ ಮತ್ತು ಇಷ್ಟು ಬರೆಯಲು ಮನಸ್ಸಾಗುತ್ತಲೂ ಇರಲಿಲ್ಲ. ಬ್ಲಾಗ್ ಬರೆಯುತ್ತಾ ಎರಡು ವರ್ಷ ಕಳೆದಿದ್ದರೂ ಕೂಡ ಮೇ ೧೦, ೨೦೦೭ ರಂದು ಮೊದಲ ಪೋಸ್ಟ್ ಹಾಕುವಾಗ ಇದ್ದ ದುಗುಡ ಈಗಲೂ ಪ್ರತಿಯೊಂದು ಪೋಸ್ಟ್ ಹಾಕುವಾಗಲೂ ಇರುತ್ತದೆ. ಮೊದಲೆಲ್ಲಾ ಮನಸಿಗೆ ಬಂದಿದ್ದನ್ನು ಕೆಚ್ಚಿ ಕೆಡವಿಹಾಕಬಹುದಿತ್ತು ಆದರೆ ಈಗ ಫಿಲ್ಟರ್ ಹಾಕಿಕೊಳ್ಳಲೇ ಬೇಕಾದ ಕೆಲವು ಅನಿವಾರ್ಯಗಳಿವೆ. ಆಫೀಸಲ್ಲೋ ಮತ್ತೆಲ್ಲೋ ಕೂತು ಕುಟ್ಟಿದ್ದು ಸರಿಯಾಗಿದೆಯಾ? ಬ್ಲಾಗ್ ಗೆ ಹಾಕುವಂತಿದೆಯಾ? ಓದುವ ಕೆಲವರಿಗಾದರೂ ಸರಿಯೆನಿಸುತ್ತಾ? ಹೀಗೆ ಹಲವು ಯೋಚನೆಗಳು ಪ್ರತಿಬಾರಿಯೂ ಇದ್ದೇ ಇರುತ್ತವೆ. ಯಾವುದೋ ಮನಃಸ್ಥಿತಿಯಲ್ಲಿ ಬರೆದದ್ದು ಅನಂತರ ಸರಿಯಾಗಿಲ್ಲ ಅನ್ನಿಸಿ ಬದಲಾಯಿಸಿದ್ದಿದೆ. ಎಲ್ಡೆಕ್ರೆ ಹೊಲ ಮಧ್ಯ ಬಾವಿ ಒಂಥರಾ ಪರವಾಗಿಲ್ಲ ಅನ್ನಿಸಿದೆ. ನನ್ನಲ್ಲಿ ಓದು, ಬರವಣಿಗೆಯನ್ನು ಕಾಯ್ದುಕೊಳ್ಳಲು ಒಂದು ರೀತಿ ಈ ಬ್ಲಾಗ್ ಕಾರಣ ಎಂದೂ, ಜೊತೆಗೆ ತೆರೆದುಕೊಳ್ಳಲು ಒಂದು ವೇದಿಕೆಯಾಗಿ ಸಹಾಯ ಮಾಡಿದ್ದೂ ಈ ಬ್ಲಾಗ್ ಎಂದೂ ಸಂತೋಷದಿಂದ ಹೇಳಿಕೊಳ್ಳುತ್ತಿದ್ದೇನೆ. ಈ ಸಂದರ್ಭದಲ್ಲಿ ವಿಕಾಸವಾದಕ್ಕೂ, ಹಲವು ರೂಪಗಳಲ್ಲಿರುವ ಎಲ್ಲಾ ಓದುಗರಿಗೂ ಪ್ರೀತಿಯಿಂದ ಥ್ಯಾಂಕ್ಸ್. :-)
ಏನೂ ಬೇಡ. ನೇರವಾಗಿ ವಿಷಯಕ್ಕೇ ಬರುತ್ತೇನೆ. ಇವತ್ತಿಗೆ ಸರಿಯಾಗಿ ನನ್ನ ಈ ಬ್ಲಾಗ್ ಶುರುಮಾಡಿ ೨ ವರ್ಷ ೩ ದಿನ ಆಯಿತು. ಮೊದಲ ವರ್ಷ ಕಳೆದಾಗ 'ವರ್ಷ ಕಳೆಯಿತು' ಎಂದು ಬರೆದಿದ್ದೆ. ಈ ಎರಡು ವರ್ಷ ಕಳೆದಾಗಲೂ '೨ ವರ್ಷ ಕಳೆಯಿತು' ಎನ್ನುವುದಕ್ಕಿಂತ ಹೆಚ್ಚಿನದೇನೂ ಆಗಿಲ್ಲ ಅಂತ ಅನ್ನಿಸಿದರೂ ಒಂದಷ್ಟು ಬದಲಾವಣೆಗಳು ಆಗಿವೆ, ತಿರುವುಗಳು ಕಂಡಿವೆ ಎಂದಷ್ಟೇ ಹೇಳಬಲ್ಲೆ. ಹಲವು ಬಾರಿ ಯಾಕೆ ಬೇಕಾಗಿತ್ತು ಈ ಬ್ಲಾಗ್ ಅನ್ನಿಸಿದೆ. ಮರುಕ್ಷಣವೇ ಇದರಲ್ಲೇ ಖುಷಿ ಅನ್ನಿಸಿದೆ. ಬ್ಲಾಗ್ ಅಂದಾಕ್ಷಣ ಬರಹದ ಜೊತೆ ಓದುಗರೂ ಅಷ್ಟೇ ಮುಖ್ಯ. ಬ್ಲಾಗ್ ಎಂದರೆ ಎಷ್ಟೇ ನಮಗೆ ನಾವು ಬರೆದುಕೊಳ್ಳುವುದು ಅದೂ ಇದೂ ಅಂತ ಏನೇ ಅಂದರೂ ಕೂಡ ಓದುಗರಿಲ್ಲದಿದ್ದಲ್ಲಿ ಡೈರಿಯಲ್ಲಿ ಬರೆದು ಒಳಗೆ ಇಡುವುದಕ್ಕೂ ಇದಕ್ಕೂ ವ್ಯತ್ಯಾಸವಿರುತ್ತಿರಲಿಲ್ಲ ಮತ್ತು ಇಷ್ಟು ಬರೆಯಲು ಮನಸ್ಸಾಗುತ್ತಲೂ ಇರಲಿಲ್ಲ. ಬ್ಲಾಗ್ ಬರೆಯುತ್ತಾ ಎರಡು ವರ್ಷ ಕಳೆದಿದ್ದರೂ ಕೂಡ ಮೇ ೧೦, ೨೦೦೭ ರಂದು ಮೊದಲ ಪೋಸ್ಟ್ ಹಾಕುವಾಗ ಇದ್ದ ದುಗುಡ ಈಗಲೂ ಪ್ರತಿಯೊಂದು ಪೋಸ್ಟ್ ಹಾಕುವಾಗಲೂ ಇರುತ್ತದೆ. ಮೊದಲೆಲ್ಲಾ ಮನಸಿಗೆ ಬಂದಿದ್ದನ್ನು ಕೆಚ್ಚಿ ಕೆಡವಿಹಾಕಬಹುದಿತ್ತು ಆದರೆ ಈಗ ಫಿಲ್ಟರ್ ಹಾಕಿಕೊಳ್ಳಲೇ ಬೇಕಾದ ಕೆಲವು ಅನಿವಾರ್ಯಗಳಿವೆ. ಆಫೀಸಲ್ಲೋ ಮತ್ತೆಲ್ಲೋ ಕೂತು ಕುಟ್ಟಿದ್ದು ಸರಿಯಾಗಿದೆಯಾ? ಬ್ಲಾಗ್ ಗೆ ಹಾಕುವಂತಿದೆಯಾ? ಓದುವ ಕೆಲವರಿಗಾದರೂ ಸರಿಯೆನಿಸುತ್ತಾ? ಹೀಗೆ ಹಲವು ಯೋಚನೆಗಳು ಪ್ರತಿಬಾರಿಯೂ ಇದ್ದೇ ಇರುತ್ತವೆ. ಯಾವುದೋ ಮನಃಸ್ಥಿತಿಯಲ್ಲಿ ಬರೆದದ್ದು ಅನಂತರ ಸರಿಯಾಗಿಲ್ಲ ಅನ್ನಿಸಿ ಬದಲಾಯಿಸಿದ್ದಿದೆ. ಎಲ್ಡೆಕ್ರೆ ಹೊಲ ಮಧ್ಯ ಬಾವಿ ಒಂಥರಾ ಪರವಾಗಿಲ್ಲ ಅನ್ನಿಸಿದೆ. ನನ್ನಲ್ಲಿ ಓದು, ಬರವಣಿಗೆಯನ್ನು ಕಾಯ್ದುಕೊಳ್ಳಲು ಒಂದು ರೀತಿ ಈ ಬ್ಲಾಗ್ ಕಾರಣ ಎಂದೂ, ಜೊತೆಗೆ ತೆರೆದುಕೊಳ್ಳಲು ಒಂದು ವೇದಿಕೆಯಾಗಿ ಸಹಾಯ ಮಾಡಿದ್ದೂ ಈ ಬ್ಲಾಗ್ ಎಂದೂ ಸಂತೋಷದಿಂದ ಹೇಳಿಕೊಳ್ಳುತ್ತಿದ್ದೇನೆ. ಈ ಸಂದರ್ಭದಲ್ಲಿ ವಿಕಾಸವಾದಕ್ಕೂ, ಹಲವು ರೂಪಗಳಲ್ಲಿರುವ ಎಲ್ಲಾ ಓದುಗರಿಗೂ ಪ್ರೀತಿಯಿಂದ ಥ್ಯಾಂಕ್ಸ್. :-)
Thursday, April 16, 2009
ರೆಕ್ಕೆ ಇದ್ದರೆ ಸಾಕೆ.......
ಹಕ್ಕಿಗೆ ರೆಕ್ಕೆ ಯಾಕಿರತ್ತೆ?................ ಹಾರೋದಕ್ಕೆ.
ಸರಿ.
ವಿಮಾನಕ್ಕೆ ರೆಕ್ಕೆ ಯಾಕಿರತ್ತೆ? ..........ಹಾರೋದಕ್ಕೆ ..
o.k. ಸರಿ.
ಹಕ್ಕಿ ಹೇಗೆ ಹಾರತ್ತೆ? ...............ರೆಕ್ಕೆ ಬಡಿದು ಹಾರುತ್ತೆ.
o.k. ಇದೂ ಸರಿ.
ರೆಕ್ಕೆ ಬಡಿಯದೇ ಇದ್ರೂ ವಿಮಾನ ಹೇಗೆ ಹಾರುತ್ತೆ? ...
ಹೋಗ್ಲಿ, ಆ ರೆಕ್ಕೆ ವಿಮಾನಾನ ಹೇಗೆ ಹಾರಿಸುತ್ತೆ? ......
ರೆಕ್ಕೆ ಇಲ್ಲದಿದ್ರೆ ವಿಮಾನ ಹಾರದೇ ಇಲ್ವಾ? ವಿಮಾನದಲ್ಲಿ ರೆಕ್ಕೆಗಳ ಕೆಲ್ಸ ಏನು?
........... .. ...
ಹೀಗೆಲ್ಲಾ ಯೋಚಿಸಿದ್ದೀರಾ?.. ಯೋಚಿಸಿದ್ರೆ ಗುಡ್ . ಯೋಚಿಸಿ ಇದರ ಬಗ್ಗೆ ತಿಳ್ಕೊಂಡಿದ್ದೀರಾ?.... ಹೌದಾದರೆ ವೆರಿ ಗುಡ್.
ಇದುವರೆಗೂ ಇದು ನಿಮ್ಮ ಯೋಚನೆಗೇ ಬಂದಿಲ್ವಾ? ಹಾಗಿದ್ರೆ ವೆರಿ ವೆರಿ ಗುಡ್.
ಬನ್ನಿ ಕೂತ್ಕೊಳ್ಳಿ, ಈಗ ನಾನು ಇದೇ ವಿಷ್ಯ ಹೇಳಕ್ಕೆ ಹೋಗ್ತಿದ್ದೀನಿ.
******
ರೆಕ್ಕೆ ವಿಷಯ ಮಾತಾಡಕಿಂತ ಮೊದಲು ಒಂದು ವಿಷಯ ತಿಳ್ಕಳಣ. ವಿಮಾನ ಹಾರೋದಕ್ಕೆ ಏನ್ ಬೇಕು ಅಂತ.
ಇದು ಸಿಂಪಲ್. ವಿಮಾನ ಹಾರೋದಕ್ಕೆ ಬೇಕಾಗಿರದು ಎರಡೇ ಎರಡು ತರದ ಬಲ(force)ಗಳು. ಒಂದಕ್ಕೆ thrust(ನೂಕು) ಅಂತಾರೆ, ಇನ್ನೊಂದಕ್ಕೆ lift(ಎತ್ತು) ಅಂತಾರೆ.
ವಿಮಾನ ಗಾಳಿಯನ್ನು ಸೀಳ್ಕೊಂಡು, ಗಾಳಿಯ ಪ್ರತಿರೋಧವನ್ನು ಎದುರಿಸ್ಕೊಂಡು ಮುಂದೆ ಹೋಗೋದಕ್ಕೆ ಬೇಕಾಗುವ ಬಲ thrust. ಇದ್ನ ಎಂಜಿನ್ ಗಳು ಮತ್ತು ಪ್ರೊಪೆಲ್ಲರ್ ಗಳ ಸಹಾಯದಿಂದ ಉತ್ಪತ್ತಿ ಮಾಡ್ತಾರೆ. ಇದು ’ಮುನ್ನುಗ್ಗುವ’ force.
ಅದೇ ರೀತಿ, ವಿಮಾನ ತನ್ನ ಭಾರಕ್ಕೆ ಕೆಳಗೆ ಬೀಳದಂತೆ, ಗುರುತ್ವಾಕರ್ಷಣ ಶಕ್ತಿಯನ್ನ ಮೆಟ್ಟಿನಿಂತು ಆಕಾಶದಲ್ಲಿ ತೇಲಲು ಬೇಕಾದ ಬಲ lift. ಈ ಲಿಫ್ಟ್ ಕ್ರಿಯೇಟ್ ಮಾಡೋದು ರೆಕ್ಕೆಗಳ ಕೆಲಸ. ಇದು ’ಮೇಲೆತ್ತುವ’ force.
ಹೇಗೆ ರೆಕ್ಕೆಗಳು ಲಿಫ್ಟ್ ಕ್ರಿಯೇಟ್ ಮಾಡ್ತವೆ ಅನ್ನೋದನ್ನ ನೋಡೋಣ.
ವಿಮಾನದ ರೆಕ್ಕೆಗಳ ಅಡ್ಡ ಕೊಯ್ತ(cross section,ಅಂದರೆ ರೆಕ್ಕೆಯನ್ನು ಕತ್ತರಿಸಿದಾಗ ಕಾಣುವ) ಆಕಾರ ಮೇಲೆ ತೋರಿಸಿದ ಚಿತ್ರದಂತಿರುತ್ತೆ. ಇದಕ್ಕೆ ವಾಯುಫಲಕ(aerofoil) ಅಂತಾರೆ. ಈ ಆಕಾರದಲ್ಲಿ ಒಂದು ವಿಷೇಶ ಇದೆ. ಗಾಳಿ ಬೀಸುವ ಎದುರು ದಿಕ್ಕಿನಲ್ಲಿ ಇದರ ಮೊಂಡು ಭಾಗ ಇರುತ್ತೆ. ಬೀಸುವ ಗಾಳಿ ಈ ಮೊಂಡು ಭಾಗಕ್ಕೆ ಬಡಿದು ರೆಕ್ಕೆಯ ಎರಡೂ ಬದಿಗೆ split ಆಗತ್ತೆ. ವಾಯುಫಲಕ ಮೇಲ್ಗಡೆ ಭಾಗ ಡೊಂಕಾಗಿರೋದ್ರಿಂದ(curved shape), ಒಂದು ನಿರ್ದಿಷ್ಟ ಕೋನದಲ್ಲಿ ಗಾಳಿ ಬಡಿದಾಗ ಅಲ್ಲಿ ಗಾಳಿಯ flow ವೇಗವಾಗಿ ಆಗತ್ತೆ. ಕೆಳಭಾಗದಲ್ಲಿ comparitively ನಿಧಾನಕ್ಕೆ ಗಾಳಿಯ ಹರಿವು ಇರತ್ತೆ. (ಇದ್ಯಾಕೆ ಹಿಂಗೇ ಆಗತ್ತೆ ಅಂತ ಕೇಳುವಂಗಿಲ್ಲ. ಅದು ನೈಸರ್ಗಿಕವಾಗಿ ಆಗುವಂತದ್ದು ಮತ್ತು ಅದನ್ನು ತಿಳಿದುಕೊಳ್ಳಬೇಕು ಅಂದ್ರೆ ಏರೋಡೈನಮಿಕ್ಸ್, ಫಿಸಿಕ್ಸ್ ಎಲ್ಲಾ ಓದ್ಕೊಂಡು ಬರ್ಬೇಕು. ಅವೆಲ್ಲಾ ಸಹವಾಸ ಬೇಡ ಸದ್ಯಕ್ಕೆ). ರೆಕ್ಕೆಯ ಮೇಲ್ಗಡೆ ಜಾಗದಲ್ಲಿ ಗಾಳಿ ವೇಗವಾಗಿ ಹಾಯ್ದು ಹೋಗೋದ್ರಿಂದ ಅಲ್ಲಿ ಒತ್ತಡ ಕಡಿಮೆ(pressure decrease) ಆಗುತ್ತೆ . ಆಗ ರೆಕ್ಕೆಯ ಕೆಳಗಡೆ ಮತ್ತು ಮೇಲ್ಗಡೆ ಜಾಗಗಳ ಮಧ್ಯ ಒತ್ತಡದ ವ್ಯತ್ಯಾಸ(pressure difference) ಉಂಟಾಗುತ್ತದೆ. ಈ ವ್ಯತ್ಯಾಸದಿಂದ ಕೆಳಗಿನ ಗಾಳಿ ರೆಕ್ಕೆಯನ್ನ ಮೇಲಕ್ಕೆ ತಳ್ಳುತ್ತೆ. ಅದಕ್ಕೇ ’ಎತ್ತುವ ಬಲ’ (lift force) ಅನ್ನುವುದು. ರೆಕ್ಕೆಯೇ ಆಗ್ಬೇಕು ಅಂತಿಲ್ಲ, ಈ ರೀತಿ ಚಲಿಸುವ ಗಾಳಿ ಒಂದು ಕೋನದಲ್ಲಿ ತಾಕಿದಾಗ ಯಾವುದೇ ವಸ್ತುವಾದ್ರೂ ಕೂಡ ಮೇಲೇಳುತ್ತದೆ. ಆದ್ರೆ ಆದಷ್ಟು ಕಡಿಮೆ ಪ್ರತಿರೋಧದಿಂದ ಮೇಲೆ ಏಳಲು ಈ aerofoil ಆಕಾರ ಸಹಾಯಕಾರಿಯಾಗಿದೆ. ಅದಕ್ಕೋಸ್ಕರವೇ ವಿಮಾನದ ರೆಕ್ಕೆಯನ್ನ ಆ ಆಕಾರದಲ್ಲಿ ತಯಾರು ಮಾಡಿರ್ತಾರೆ. ಈ ಮೇಲಕ್ಕೆ ಎತ್ತುವ ಬಲ ಗುರುತ್ವಾಕರ್ಷಣ ಶಕ್ತಿಗಿಂತ ಜಾಸ್ತಿ ಇರುವ ಹಾಗೆ ಎರಡೂ ಕಡೆ ಅಗಲವಾದ ರೆಕ್ಕೆಗಳನ್ನು ವಿನ್ಯಾಸ ಮಾಡಿರ್ತಾರೆ. ಆದ್ದರಿಂದ ಇವು ವಿಮಾನಾನ್ನ ಗಾಳಿಯಲ್ಲಿ ತೇಲಿಸಿ ಹಿಡಿದುಕೊಳ್ತವೆ. ಇಷ್ಟೆ ವಿಮಾನದ ರೆಕ್ಕೆಗಳ ಕೆಲಸ .
********

ಇದು ಇರೋದು ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂ ನಲ್ಲಿ. ಇದೇ ರೀತಿ ಅಲ್ಲಿ ಬಯಾಲಜಿ, ಸೆಟಲೈಟ್ಸ್, ಹಿಸ್ಟರಿ, , ಎಲೆಕ್ಟ್ರಾನಿಕ್ಸ್, ವಿಜ್ಞಾನ, ಸಾಮಾನ್ಯಜ್ಞಾನ, ಮೆಷಿನ್ಸ್, ಎಂಜಿನ್ಸ್, ಅದು ಇದು, ಹಾಳುಮೂಳು ಮಣ್ಣು ಮಸಿ ಅಂತ ಏನೇನೇನೇನೋ ಇದೆ. 3D theatre ಒಳಗೆ ಹೋದ್ರೆ ಬೇಜಾನ್ ಮಜಾ ಇರತ್ತೆ, ಮಕ್ಕಳಿಗಂತೂ ಖುಷಿಯೋ ಖುಷಿ ಆಗತ್ತೆ. ಇಂತಹ ಹತ್ತು ಹಲವಾರು ವಿಷಯಗಳನ್ನು ತಿಳಿದುಕೊಳ್ಬೇಕು, ನೋಡಿ ಆನಂದ ಪಡಬೇಕು ಅಂತ ಆಸಕ್ತಿ ಇರೋರಿಗೆ, ಎಲ್ಲಾ ವಿದ್ಯಾರ್ಥಿಗಳಿಗೆ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅದರಲ್ಲೂ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಳ್ಳೇ ಜಾಗ . ಫ್ರೀ ಇದ್ದಾಗ ಆದ್ರೆ ಒಮ್ಮೆ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಹೋಗ್ಬನ್ನಿ. ಒತ್ತಾಯ ಏನಿಲ್ಲ. :)
ಸರಿ.
ವಿಮಾನಕ್ಕೆ ರೆಕ್ಕೆ ಯಾಕಿರತ್ತೆ? ..........ಹಾರೋದಕ್ಕೆ ..
o.k. ಸರಿ.
ಹಕ್ಕಿ ಹೇಗೆ ಹಾರತ್ತೆ? ...............ರೆಕ್ಕೆ ಬಡಿದು ಹಾರುತ್ತೆ.
o.k. ಇದೂ ಸರಿ.
ರೆಕ್ಕೆ ಬಡಿಯದೇ ಇದ್ರೂ ವಿಮಾನ ಹೇಗೆ ಹಾರುತ್ತೆ? ...
ಹೋಗ್ಲಿ, ಆ ರೆಕ್ಕೆ ವಿಮಾನಾನ ಹೇಗೆ ಹಾರಿಸುತ್ತೆ? ......
ರೆಕ್ಕೆ ಇಲ್ಲದಿದ್ರೆ ವಿಮಾನ ಹಾರದೇ ಇಲ್ವಾ? ವಿಮಾನದಲ್ಲಿ ರೆಕ್ಕೆಗಳ ಕೆಲ್ಸ ಏನು?
........... .. ...
ಹೀಗೆಲ್ಲಾ ಯೋಚಿಸಿದ್ದೀರಾ?.. ಯೋಚಿಸಿದ್ರೆ ಗುಡ್ . ಯೋಚಿಸಿ ಇದರ ಬಗ್ಗೆ ತಿಳ್ಕೊಂಡಿದ್ದೀರಾ?.... ಹೌದಾದರೆ ವೆರಿ ಗುಡ್.
ಇದುವರೆಗೂ ಇದು ನಿಮ್ಮ ಯೋಚನೆಗೇ ಬಂದಿಲ್ವಾ? ಹಾಗಿದ್ರೆ ವೆರಿ ವೆರಿ ಗುಡ್.
ಬನ್ನಿ ಕೂತ್ಕೊಳ್ಳಿ, ಈಗ ನಾನು ಇದೇ ವಿಷ್ಯ ಹೇಳಕ್ಕೆ ಹೋಗ್ತಿದ್ದೀನಿ.
******
ರೆಕ್ಕೆ ವಿಷಯ ಮಾತಾಡಕಿಂತ ಮೊದಲು ಒಂದು ವಿಷಯ ತಿಳ್ಕಳಣ. ವಿಮಾನ ಹಾರೋದಕ್ಕೆ ಏನ್ ಬೇಕು ಅಂತ.
ಇದು ಸಿಂಪಲ್. ವಿಮಾನ ಹಾರೋದಕ್ಕೆ ಬೇಕಾಗಿರದು ಎರಡೇ ಎರಡು ತರದ ಬಲ(force)ಗಳು. ಒಂದಕ್ಕೆ thrust(ನೂಕು) ಅಂತಾರೆ, ಇನ್ನೊಂದಕ್ಕೆ lift(ಎತ್ತು) ಅಂತಾರೆ.
ವಿಮಾನ ಗಾಳಿಯನ್ನು ಸೀಳ್ಕೊಂಡು, ಗಾಳಿಯ ಪ್ರತಿರೋಧವನ್ನು ಎದುರಿಸ್ಕೊಂಡು ಮುಂದೆ ಹೋಗೋದಕ್ಕೆ ಬೇಕಾಗುವ ಬಲ thrust. ಇದ್ನ ಎಂಜಿನ್ ಗಳು ಮತ್ತು ಪ್ರೊಪೆಲ್ಲರ್ ಗಳ ಸಹಾಯದಿಂದ ಉತ್ಪತ್ತಿ ಮಾಡ್ತಾರೆ. ಇದು ’ಮುನ್ನುಗ್ಗುವ’ force.
ಅದೇ ರೀತಿ, ವಿಮಾನ ತನ್ನ ಭಾರಕ್ಕೆ ಕೆಳಗೆ ಬೀಳದಂತೆ, ಗುರುತ್ವಾಕರ್ಷಣ ಶಕ್ತಿಯನ್ನ ಮೆಟ್ಟಿನಿಂತು ಆಕಾಶದಲ್ಲಿ ತೇಲಲು ಬೇಕಾದ ಬಲ lift. ಈ ಲಿಫ್ಟ್ ಕ್ರಿಯೇಟ್ ಮಾಡೋದು ರೆಕ್ಕೆಗಳ ಕೆಲಸ. ಇದು ’ಮೇಲೆತ್ತುವ’ force.
ಹೇಗೆ ರೆಕ್ಕೆಗಳು ಲಿಫ್ಟ್ ಕ್ರಿಯೇಟ್ ಮಾಡ್ತವೆ ಅನ್ನೋದನ್ನ ನೋಡೋಣ.

ವಿಮಾನದ ರೆಕ್ಕೆಗಳ ಅಡ್ಡ ಕೊಯ್ತ(cross section,ಅಂದರೆ ರೆಕ್ಕೆಯನ್ನು ಕತ್ತರಿಸಿದಾಗ ಕಾಣುವ) ಆಕಾರ ಮೇಲೆ ತೋರಿಸಿದ ಚಿತ್ರದಂತಿರುತ್ತೆ. ಇದಕ್ಕೆ ವಾಯುಫಲಕ(aerofoil) ಅಂತಾರೆ. ಈ ಆಕಾರದಲ್ಲಿ ಒಂದು ವಿಷೇಶ ಇದೆ. ಗಾಳಿ ಬೀಸುವ ಎದುರು ದಿಕ್ಕಿನಲ್ಲಿ ಇದರ ಮೊಂಡು ಭಾಗ ಇರುತ್ತೆ. ಬೀಸುವ ಗಾಳಿ ಈ ಮೊಂಡು ಭಾಗಕ್ಕೆ ಬಡಿದು ರೆಕ್ಕೆಯ ಎರಡೂ ಬದಿಗೆ split ಆಗತ್ತೆ. ವಾಯುಫಲಕ ಮೇಲ್ಗಡೆ ಭಾಗ ಡೊಂಕಾಗಿರೋದ್ರಿಂದ(curved shape), ಒಂದು ನಿರ್ದಿಷ್ಟ ಕೋನದಲ್ಲಿ ಗಾಳಿ ಬಡಿದಾಗ ಅಲ್ಲಿ ಗಾಳಿಯ flow ವೇಗವಾಗಿ ಆಗತ್ತೆ. ಕೆಳಭಾಗದಲ್ಲಿ comparitively ನಿಧಾನಕ್ಕೆ ಗಾಳಿಯ ಹರಿವು ಇರತ್ತೆ. (ಇದ್ಯಾಕೆ ಹಿಂಗೇ ಆಗತ್ತೆ ಅಂತ ಕೇಳುವಂಗಿಲ್ಲ. ಅದು ನೈಸರ್ಗಿಕವಾಗಿ ಆಗುವಂತದ್ದು ಮತ್ತು ಅದನ್ನು ತಿಳಿದುಕೊಳ್ಳಬೇಕು ಅಂದ್ರೆ ಏರೋಡೈನಮಿಕ್ಸ್, ಫಿಸಿಕ್ಸ್ ಎಲ್ಲಾ ಓದ್ಕೊಂಡು ಬರ್ಬೇಕು. ಅವೆಲ್ಲಾ ಸಹವಾಸ ಬೇಡ ಸದ್ಯಕ್ಕೆ). ರೆಕ್ಕೆಯ ಮೇಲ್ಗಡೆ ಜಾಗದಲ್ಲಿ ಗಾಳಿ ವೇಗವಾಗಿ ಹಾಯ್ದು ಹೋಗೋದ್ರಿಂದ ಅಲ್ಲಿ ಒತ್ತಡ ಕಡಿಮೆ(pressure decrease) ಆಗುತ್ತೆ . ಆಗ ರೆಕ್ಕೆಯ ಕೆಳಗಡೆ ಮತ್ತು ಮೇಲ್ಗಡೆ ಜಾಗಗಳ ಮಧ್ಯ ಒತ್ತಡದ ವ್ಯತ್ಯಾಸ(pressure difference) ಉಂಟಾಗುತ್ತದೆ. ಈ ವ್ಯತ್ಯಾಸದಿಂದ ಕೆಳಗಿನ ಗಾಳಿ ರೆಕ್ಕೆಯನ್ನ ಮೇಲಕ್ಕೆ ತಳ್ಳುತ್ತೆ. ಅದಕ್ಕೇ ’ಎತ್ತುವ ಬಲ’ (lift force) ಅನ್ನುವುದು. ರೆಕ್ಕೆಯೇ ಆಗ್ಬೇಕು ಅಂತಿಲ್ಲ, ಈ ರೀತಿ ಚಲಿಸುವ ಗಾಳಿ ಒಂದು ಕೋನದಲ್ಲಿ ತಾಕಿದಾಗ ಯಾವುದೇ ವಸ್ತುವಾದ್ರೂ ಕೂಡ ಮೇಲೇಳುತ್ತದೆ. ಆದ್ರೆ ಆದಷ್ಟು ಕಡಿಮೆ ಪ್ರತಿರೋಧದಿಂದ ಮೇಲೆ ಏಳಲು ಈ aerofoil ಆಕಾರ ಸಹಾಯಕಾರಿಯಾಗಿದೆ. ಅದಕ್ಕೋಸ್ಕರವೇ ವಿಮಾನದ ರೆಕ್ಕೆಯನ್ನ ಆ ಆಕಾರದಲ್ಲಿ ತಯಾರು ಮಾಡಿರ್ತಾರೆ. ಈ ಮೇಲಕ್ಕೆ ಎತ್ತುವ ಬಲ ಗುರುತ್ವಾಕರ್ಷಣ ಶಕ್ತಿಗಿಂತ ಜಾಸ್ತಿ ಇರುವ ಹಾಗೆ ಎರಡೂ ಕಡೆ ಅಗಲವಾದ ರೆಕ್ಕೆಗಳನ್ನು ವಿನ್ಯಾಸ ಮಾಡಿರ್ತಾರೆ. ಆದ್ದರಿಂದ ಇವು ವಿಮಾನಾನ್ನ ಗಾಳಿಯಲ್ಲಿ ತೇಲಿಸಿ ಹಿಡಿದುಕೊಳ್ತವೆ. ಇಷ್ಟೆ ವಿಮಾನದ ರೆಕ್ಕೆಗಳ ಕೆಲಸ .
********
ಅರ್ಥಾಯ್ತಾ? ತಲೆ ಕೆಡ್ತಾ? fine.
ಥಿಯರಿ ಓದಿದ್ರೆ ಅರ್ಥಾಗೋದು ಸ್ವಲ್ಪ ಕಷ್ಟ. ಆದ್ರೆ ಕಣ್ಣಾರೆ ನೋಡಿದರೆ ಅರ್ಥ ಮಾಡ್ಕೊಳ್ಳದು ಸುಲಭ ಅಲ್ವಾ. ಇಲ್ನೋಡಿ ಈ ಕೆಳಗಿನ ಮಾಡೆಲ್. ರೆಕ್ಕೆಯ aerofoil ಆಕಾರ ಮತ್ತು ಒತ್ತಡದ ವ್ಯತ್ಯಾಸ ಉಂಟಾಗೋದನ್ನ ಇದರಲ್ಲಿ ಪ್ರಾಕ್ಟಿಕಲ್ಲಾಗಿ ನೋಡ್ಬೋದು. ಇದರಲ್ಲಿ ಮುಂದಿರುವ ಕೊಳವೆಯಿಂದ ಬರುವ ಗಾಳಿಗೆ ಸರಿಯಾಗಿ ರೆಕ್ಕೆಯನ್ನು ಎತ್ತಿ ಹಿಡಿದರೆ pressure difference ಉಂಟಾಗಿ ಕೆಳಗಿನ ಕೊಳವೆಯಲ್ಲಿರುವ ಚೆಂಡು ಮೇಲೆ ಬರೋದನ್ನ ನೋಡ್ಬೋದು.ಇದು ಇರೋದು ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂ ನಲ್ಲಿ. ಇದೇ ರೀತಿ ಅಲ್ಲಿ ಬಯಾಲಜಿ, ಸೆಟಲೈಟ್ಸ್, ಹಿಸ್ಟರಿ, , ಎಲೆಕ್ಟ್ರಾನಿಕ್ಸ್, ವಿಜ್ಞಾನ, ಸಾಮಾನ್ಯಜ್ಞಾನ, ಮೆಷಿನ್ಸ್, ಎಂಜಿನ್ಸ್, ಅದು ಇದು, ಹಾಳುಮೂಳು ಮಣ್ಣು ಮಸಿ ಅಂತ ಏನೇನೇನೇನೋ ಇದೆ. 3D theatre ಒಳಗೆ ಹೋದ್ರೆ ಬೇಜಾನ್ ಮಜಾ ಇರತ್ತೆ, ಮಕ್ಕಳಿಗಂತೂ ಖುಷಿಯೋ ಖುಷಿ ಆಗತ್ತೆ. ಇಂತಹ ಹತ್ತು ಹಲವಾರು ವಿಷಯಗಳನ್ನು ತಿಳಿದುಕೊಳ್ಬೇಕು, ನೋಡಿ ಆನಂದ ಪಡಬೇಕು ಅಂತ ಆಸಕ್ತಿ ಇರೋರಿಗೆ, ಎಲ್ಲಾ ವಿದ್ಯಾರ್ಥಿಗಳಿಗೆ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅದರಲ್ಲೂ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಳ್ಳೇ ಜಾಗ . ಫ್ರೀ ಇದ್ದಾಗ ಆದ್ರೆ ಒಮ್ಮೆ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಹೋಗ್ಬನ್ನಿ. ಒತ್ತಾಯ ಏನಿಲ್ಲ. :)
Tuesday, April 14, 2009
ಟೀವೀ ನೈನೂ ಮತ್ತು ’ಚಂದ್ರಯಾನ’ವೂ..
ನಿನ್ನೆ ರಾತ್ರಿ ೧೦:೩೦, ಅಪ್ಪನ ಫೋನಿಂದ ಮೆಸೇಜು ಬಂತು - "ನಿನ್ನನ್ನ TV9ನಲ್ಲಿ ನೋಡಿದೆವು! "
ಚಂದ್ರಯಾನದಂತಹ ಯೋಜನೆಗಳ ಬಗ್ಗೆ ಜನರಲ್ಲಿ ಆಸಕ್ತಿ, ಗೌರವ ಮೂಡಿಸಲು, ಮಕ್ಕಳನ್ನು, ಯುವಕರನ್ನು ಇಂತಹ ಕ್ಷೇತ್ರಗಳ ಕಡೆಗೆ ಸೆಳೆಯಲು, ಸಂಶೋಧನಾ ಕೆಲಸಗಳ ಬಗ್ಗೆ ಆಸಕ್ತಿ ವಹಿಸುವಂತೆ ಮಾಡಲು ಇಂತಹ ಪುಸ್ತಕಗಳ ಅಗತ್ಯ ಬಹಳ ಇದೆ. ಪ್ರೌಢಶಾಲಾ ಮಟ್ಟದಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರಿಗೂ ಸಹಕಾರಿಯಾಗಬಲ್ಲ, ಅಗತ್ಯವಾಗಿ ಓದಬೇಕಾದ ಪುಸ್ತಕ ಇದು. ಅಬ್ದುಲ್ ಕಲಾಂರವರು ಇದನ್ನು ಮೊದಲೇ ಅನೌಪಚಾರಿಕವಾಗಿ ಬಿಡುಗಡೆ ಮಾಡಿ ಶಭಾಷ್ಗಿರಿ ಕೊಟ್ಟಿದ್ದಾರೆ. ಇಂತಹ ಹೆಚ್ಚು ಹೆಚ್ಚು ಪುಸ್ತಕಗಳು ಬರಲಿ ಎಂದು ಆಸೆ ಪಡೋಣ.
ಎದೆ ಧಸಕ್ ಎಂದಿತು. ಚಂದನದಲ್ಲೋ, ಕಸ್ತೂರಿಯಲ್ಲೋ, ಈ ಟೀವಿಯಲ್ಲೋ ನೋಡಿದೆ ಎಂದಿದ್ದರೆ ಏನಾಗುತ್ತಿರಲಿಲ್ಲ. ಆದರೆ ಹೇಳಿ ಕೇಳಿ ಅದು ಟೀವಿ ನೈನು! ಸುದ್ದಿಯನ್ನು ಮನರಂಜನೆಯಂತೆ ಕೊಟ್ಟು, ಮನರಂಜನೆಯನ್ನು ಅತಿರೇಕ ಮಾಡಿ, ಅತಿರೇಕವನ್ನು ಮಾಮೂಲಿನಂತೆ ದಿನವಿಡೀ ತೋರಿಸಿ ’ಉತ್ತಮ ಸಮಾಜಕ್ಕಾಗಿ’ ದುಡಿಯುತ್ತಿರುವ ಅಪರೂಪದ ವಾಹಿನಿ ಅದು. ಅಂದ ಮೇಲೆ ಗಾಬರಿಯಾಗದೇ ಇರುತ್ತದೆಯೇ. ಅವರ ಕ್ಯಾಮೆರಾ ಎಲ್ಲೆಲ್ಲಿ ಇರುತ್ತದೋ ಯಾರಿಗೆ ಗೊತ್ತು. ನಾವು ಹುಡುಗರು ಎಲ್ಲೆಲ್ಲೋ ನಿಂತಿರುತ್ತೇವೆ, ಏನೇನೋ ಮಾಡುತ್ತಿರುತ್ತೇವೆ. ಇನ್ಯಾವುದೋ ವರದಿಯ ಸಂದರ್ಭದಲ್ಲಿ ಅಕಸ್ಮಾತಾಗಿಯೋ , ಉದ್ದೇಶಪೂರ್ವಕವಾಗಿಯೋ ನಮ್ಮ ಮೇಲೆ ಕ್ಯಾಮೆರಾ ಕಣ್ಣು ಬಿದ್ದು ಅದು ಬೇರೆ ಏನೋ ಅರ್ಥ ಕೊಟ್ಟು ಬ್ರೇಕಿಂಗ್ ನ್ಯೂಸ್ ಆಗಿಹೋಯಿತಾ ಎಂದು ಹೆದರಿಕೆಯಾಯಿತು.
ರೆಹಮಾನ್, ಆ ಹುಡುಗ್ರು ಅಲ್ಲಿ ಎಷ್ಟೊತ್ತಿಂದ ನಿಂತಿದಾರೆ?
.................................
ಅವರ ಕೈಯಲ್ಲಿ ಏನೋ ವೈಟ್ ಕಲರ್ ವಸ್ತು ಇದೆಯಲ್ಲ, ಅದು ಏನೂಂತ ಹೇಳಕ್ಕಾಗತ್ತಾ?
.................................
ಅವರು ಇನ್ನೂ ಅಲ್ಲೇ ಎಷ್ಟು ಹೊತ್ತು ನಿಂತಿರ್ತಾರೆ ಅಂತ ಹೇಳ್ತೀರಾ
...............
ಹೀಗೆಲ್ಲಾ ಅವರ ವರದಿಗಾರ-ಸ್ಟುಡಿಯೋ ಮಧ್ಯೆ ಸಂಭಾಷಣೆ ಕಲ್ಪಿಸಿಕೊಂಡು ದಿಗಿಲಾದೆ. ಯಾವುದಕ್ಕೆ ಏನು ರೆಕ್ಕೆಪುಕ್ಕ ಸೇರಿಸಿ, ಮಸಾಲೆ ಅರೆದು, ಬಣ್ಣ ಹಚ್ಚಿ ತೋರಿಸಿಬಿಡುತ್ತಾರೋ ಯಾರಿಗೆ ಗೊತ್ತು ನಮ್ ಗ್ರಾಚಾರ! :)
ಕೆಲವರ್ಷಗಳ ಹಿಂದೆ ಹೀಗೇ ಆಗಿತ್ತು. ನಾನು ಮೊದಲು ಕೆಲಸ ಮಾಡುತ್ತಿದ್ದ ಕಂಪನಿಯ ಕ್ಯಾಂಪಸ್ಸಿನಲ್ಲೇ ಕಾಲ್ ಸೆಂಟರ್ ಒಂದಿತ್ತು. ಆಗ ಅದ್ಯಾವುದೋ ಕಾಲ್ ಸೆಂಟರ್ ಹುಡುಗಿಯನ್ನು ಕ್ಯಾಬ್ ಚಾಲಕನೊಬ್ಬ ಎತ್ತಾಕಿಕೊಂಡು ಹೋಗಿ ರೇಪ್ & ಕೊಲೆ ಮಾಡಿದ ಘಟನೆ ಹಸಿಹಸಿಯಾಗಿತ್ತು. ಕ್ರೈಂ ಡೈರಿ, ಸ್ಟೋರಿ ಮುಂತಾದ ಕ್ಯಾಮೆರಾಗಳು ಕಾಲ್ ಸೆಂಟರ್ ಗಳ ಹಿಂದೆ ಬಿದ್ದಿದ್ದವು. ನಮಗೂ ಎರಡನೇ ಪಾಳಿ ಇರುತ್ತಿದ್ದುದ್ದರಿಂದ ರಾತ್ರಿ ೧ ರ ವರೆಗೆ ಆಫೀಸಿನಲ್ಲೇ ಇರಬೇಕಾಗುತ್ತಿತ್ತು. ಆಗಾಗ ಗಾಳಿ ಸೇವನೆಗೆಂದು, ನಿದ್ದೆ ಬರದಿರಲೆಂದು ನಾವು ಹೊರಗೆ ಹೋಗುತ್ತಿದ್ದೆವು. ಅದೇ ಜಾಗಕ್ಕೆ ಕಾಲ್ ಸೆಂಟರಿನ ಹುಡುಗ ಹುಡುಗಿಯರೂ ಬರುತ್ತಿದ್ದರು.
ಆ ಹುಡುಗಿಯರ ಅಸ್ತವ್ಯಸ್ತ ಬಟ್ಟೆಗಳು, ಅವರು ಸೇದುತ್ತಿದ್ದ ಪ್ಯಾಕುಗಟ್ಟಲೇ ಸಿಗರೇಟುಗಳು, ಯಾವ ಮುಲಾಜೂ ಇಲ್ಲದಂತೆ ಹುಡುಗಿಯರ ಮೈಮೇಲೆ ಎಲ್ಲೆಲ್ಲೋ ಹರಿದಾಡುತ್ತಿದ್ದ ಹುಡುಗರ ಕೈಗಳು, ಮಬ್ಬುಗತ್ತಲಲ್ಲಿ ಪರಸ್ಪರ ದಾಹ ತೀರಿಸಿಕೊಳ್ಳುತ್ತಿದ್ದ ತುಟಿಗಳು, ಚಳಿಗಾಲದ ಹೀಟ್ ಟ್ರಾನ್ಸ್ ಫರ್ ಗಳು ಎಲ್ಲವನ್ನೂ ಸುತ್ತಮುತ್ತಲೇ ನೋಡುತ್ತಿದ್ದೆವು. ಎಥ್ನಿಕ್ ಡೇ ಹೆಸರಲ್ಲಿ ಕಾಲ್ ಸೆಂಟರ್ ಹುಡುಗೀರು ಸೀರೆ ಉಟ್ಟುಕೊಂಡು ಬಂದಾಗ ಮಾತ್ರ ನಮಗೆ ಬಹಳ ಸಂಕಟವಾಗುತ್ತಿತ್ತು. ಅದ್ಯಾಕೆ ನೆಟ್ಟಗೆ ಸೀರೆ ಉಟ್ಟುಕೊಂಡು ಬರುತ್ತಿರಲಿಲ್ವಾ ಅಂತೀರಾ? ಇಲ್ಲ ಹಾಗೇನಿಲ್ಲ , ಪಾಪ ಸರಿಯಾಗೇ ಸೀರೆ ಉಟ್ಟುಕೊಂಡೇ ಬಂದಿರ್ತಿದ್ರು, ಆದರೆ ಹುಡುಗೀರು ಸೀರೆ ಉಟ್ಟುಕೊಂಡು ಸಿಗರೇಟ್ ಸೇದುವುದನ್ನು ನೋಡೋಕಾಗೋಲ್ಲ ಕಣ್ರೀ. ಬೇಕಿದ್ರೆ ಜೀನ್ಸ್ ಟೀಶರ್ಟ್ ಅಥವಾ ಇನ್ನೇನನ್ನೋ ಹಾಕಿಕೊಂಡು ಸೇದಿದರೆ ಅದು ನೋಡೆಬಲ್.
ನೀವು ಹುಡುಗರು ಯಾವ ಬಟ್ಟೆ ಬೇಕಿದ್ರೂ ಹಾಕಿಕೊಂಡು ಏನ್ ಬೇಕಾದ್ರೂ ಮಾಡ್ತೀರಾ, ಹುಡುಗಿಯರಿಗೆ ಮಾತ್ರ ಕಟ್ಟು ಪಾಡು, ಶೋಷಣೆ, ದೌರ್ಜನ್ಯ ಅದು ಇದು ಅಂತ ಸ್ತ್ರೀವಾದಿಗಳು ಮೂದಲಿಸಿದರೂ ಪರ್ವಾಗಿಲ್ಲ, ಸೀರೆ ಉಟ್ಟುಕೊಂಡರೆ ಸಭ್ಯರೆಂಬ ಭಾವನೆಯೋ ಅಥವಾ ಸೀರೆ ಉಟ್ಟಿರುವವರೆಲ್ಲಾ ಅಮ್ಮಂದಿರಂತೆ ಎಂಬ ಮುಗ್ಧತೆಯೋ ಗೊತ್ತಿಲ್ಲ, ನಮಗೆ ಆ ಸೀರೆ ಮೇಲೆ ಚಿಕ್ಕಂದಿನಿಂದ ಏನೋ ಗೌರವ. ಇರ್ಲಿ ಬಿಡಿ. ಯಾರಿಗೂ ಏನೂ ಹೇಳುವ ಹಾಗಿಲ್ಲ, ಎಲ್ಲರೂ ೨೧ ನೇ ಶತಮಾನದವರರು, modern, forward, broad minded and independent. They know what is right and wrong. They don't want moral policing by anybody.
ಇದೇನು ಇಂಗ್ಲೀಷ್ ಬಂತು ಮಧ್ಯದಲ್ಲಿ !. ಹೋಗ್ಲಿ ಬಿಡಿ.. ಅದೆಲ್ಲ ವಿಷ್ಯ ಬೇಡ ಈಗ .
ನಮ್ಮ ತಲೆಬಿಸಿ ಇದ್ದದ್ದು ಟೀವಿ ಕ್ಯಾಮೆರಾಗಳ ಬಗ್ಗೆ ಮಾತ್ರ. ಅವರು ಎಲ್ಲೋ ಕ್ಯಾಮೆರಾ ಇಟ್ಟು ಫೋಕಸ್ ಮಾಡಿ ಕಾಲ್ ಸೆಂಟರ್ ಜನರ ಜೊತೆ ನಮ್ಮನ್ನೂ ಸೇರಿಸಿ ಟೀವಿನಲ್ಲಿ ತೋರಿಸಿ ಅದನ್ನು ನಮ್ಮೂರಲ್ಲೆಲ್ಲಾ ನೋಡಿ ಫಜೀತಿಯಾಗಿ ಬಿಡುತ್ತದೆ ಎಂಬ ಭಯ ಇತ್ತು. ಈ ಬ್ಲಾಗ್, ಇಂಟರ್ನೆಟ್ ನಲ್ಲೆಲ್ಲಾ ಏನೇ ಬರೆದುಕೊಂಡರೂ ಪರ್ವಾಗಿಲ್ಲ , ಯಾರೂ ಓದಲ್ಲ. ಆದರೆ ಟೀವಿ ಮಾತ್ರ ಹಾಗಲ್ಲ ನೋಡಿ. :)
ನಮ್ಮ ತಲೆಬಿಸಿ ಇದ್ದದ್ದು ಟೀವಿ ಕ್ಯಾಮೆರಾಗಳ ಬಗ್ಗೆ ಮಾತ್ರ. ಅವರು ಎಲ್ಲೋ ಕ್ಯಾಮೆರಾ ಇಟ್ಟು ಫೋಕಸ್ ಮಾಡಿ ಕಾಲ್ ಸೆಂಟರ್ ಜನರ ಜೊತೆ ನಮ್ಮನ್ನೂ ಸೇರಿಸಿ ಟೀವಿನಲ್ಲಿ ತೋರಿಸಿ ಅದನ್ನು ನಮ್ಮೂರಲ್ಲೆಲ್ಲಾ ನೋಡಿ ಫಜೀತಿಯಾಗಿ ಬಿಡುತ್ತದೆ ಎಂಬ ಭಯ ಇತ್ತು. ಈ ಬ್ಲಾಗ್, ಇಂಟರ್ನೆಟ್ ನಲ್ಲೆಲ್ಲಾ ಏನೇ ಬರೆದುಕೊಂಡರೂ ಪರ್ವಾಗಿಲ್ಲ , ಯಾರೂ ಓದಲ್ಲ. ಆದರೆ ಟೀವಿ ಮಾತ್ರ ಹಾಗಲ್ಲ ನೋಡಿ. :)
ಯಾವುದೋ ವಿಷಯ ಹೇಳಲು ಹೋಗಿ ಏನೋ ಹೇಳುತ್ತಾ ಕೂತೆ. ನೀವೂ ಅದನ್ನು ಓದುತ್ತಾ ಕೂತಿರಿ. ಅಸಲು ವಿಷಯ ಇನ್ಮುಂದಿದೆ.
ಎಲೆಕ್ಟ್ರಾನಿಕ್ ಮಾಧ್ಯಮಗಳ ಈ ಕಾಲದಲ್ಲಿ ನಿನ್ನೆಯ ಸುದ್ದಿ ಇವತ್ತಿಗೆ ಹಳತಾಗಿ ಹೋಗಿರುತ್ತದೆ. ಏನಾದರೂ ಘಟನೆಗಳು ನೆಡೆದಾಗ ಅವು ಹಸಿ ಇರುವಾಗಲೇ ಅದನ್ನು ಸರಿಯಾಗಿ ಬಳಸಿಕೊಳ್ಳುವುದು ಒಳ್ಳೆಯದು. ಇಂಗ್ಲೀಷ್ ಬರವಣಿಗೆಯ ಜಗತ್ತು ಇದನ್ನು ಯಾವತ್ತೋ ಅಳವಡಿಸಿಕೊಂಡಿದೆ. ಆದರೆ ಕನ್ನಡ ಜಗತ್ತು ಈಗೀಗ ಅಳವಡಿಸಿಕೊಳ್ಳುತ್ತಿದೆ. (ಅಥವಾ ಮೊದಲೇ ಅಳವಡಿಸಿಕೊಂಡಿದ್ದರೆ ನನ್ನ ಅಜ್ಞಾನವೆಂದು ಮನ್ನಿಸಿ). ಅಮೆರಿಕಾದಲ್ಲಿ ಟ್ವಿನ್ ಟವರ್ ದುರಂತ ಆದಾಗ ಕೆಲವೇ ತಿಂಗಳುಗಳಲ್ಲಿ ಆ ಘಟನೆಯದ ವಿವರಗಳನ್ನೊಳಗೊಂಡ ಹಲವಾರು ದಪ್ಪ ದಪ್ಪ ಪುಸ್ತಕಗಳು ಬಂದವು. ಆ ಘಟನೆ ಇನ್ನೂ ಜನರ ಮನಸಲ್ಲಿ ಹಸಿಯಿದ್ದುದರಿಂದ ಪುಸ್ತಕಗಳು ಬಿಸಿಬಿಸಿಯಾಗಿ ಖರ್ಚಾದವು. ಕನ್ನಡದಲ್ಲೂ ಕೂಡ ಮೊನ್ನೆ ಮೊನ್ನೆ ದೈತ್ಯ ಬರಹಗಾರ ರವಿ ಬೆಳಗೆರೆಯವರು ಮುಂಬೈ ಘಟನೆಯನ್ನು ವಿಷಯವಾಗಿರಿಸಿಕೊಂಡು ’ಮೇಜರ್ ಸಂದೀಪ್ ಹತ್ಯೆ’ ಎಂಬ ಪುಸ್ತಕ ಬರೆದು ಬಿಡುಗಡೆ ಮಾಡಿದರು. ಇದು ಭಾವನೆಗಳನ್ನು encash ಮಾಡಿಕೊಳ್ಳುವುದು ಎಂದು ಕೆಲವರು ಟೀಕಿಸಿದರೂ ಕೂಡ ಅಂತಹ ಘಟನೆಗಳ ಬಗ್ಗೆ ಆಳವಾಗಿ ತಿಳಿದುಕೊಳ್ಳಲು, ಜನರ ಮನಸಲ್ಲಿ ಇಳಿಯಲು ಸಹಕಾರಿಯಾಗುತ್ತವೆ.
ಈಗ ’ಚಂದ್ರಯಾನ’ದ ವಿಷಯಕ್ಕೆ ಬರೋಣ. ಕೆಲ ತಿಂಗಳುಗಳ ಹಿಂದೆ ನಮ್ಮ ವಿಜ್ಞಾನಿಗಳು ಚಂದ್ರಯಾನ-೧ ಯೋಜನೆಯನ್ನು ಯಶಸ್ವಿಯಾಗಿ ಕೈಗೊಂಡರು. ಇದು ಭಾರತದ ಹೆಮ್ಮೆಯ ಸಾಧನೆ. ನಿನ್ನೆ ’ಚಂದ್ರಯಾನ’ ಪುಸ್ತಕ ಬಿಡುಗಡೆಯಾಯಿತು. ಟೀವಿ ನೈನ್ ಉದ್ಯೋಗಿ ಶ್ರೀ ಶಿವಪ್ರಸಾದ್ ಮತ್ತು ಮಿತ್ರರು ಇಸ್ರೋ ಚಂದ್ರಯಾನದ ಯೋಜನೆಯ ವಿಷಯವನ್ನಿಟ್ಟುಕೊಂಡು ಪುಸ್ತಕ ಬರೆದಿದ್ದಾರೆ. ಕನ್ನಡ ಬರವಣಿಗೆ ಲೋಕದಲ್ಲಿ ಮಾಹಿತಿ ಸಾಹಿತ್ಯದ ಅಗತ್ಯತೆ ದೃಷ್ಟಿಯಿಂದ ಈ ಪುಸ್ತಕ ನಿಜವಾಗಿಯೂ ಒಂದು ಒಳ್ಳೆಯ ಸಾಮಗ್ರಿಯಾಗಿ ಹೊರಬಂದಿದೆ. ಈ ಪುಸ್ತಕದಲ್ಲಿ ಚಂದ್ರನ ಬಗ್ಗೆ ವಿವರಗಳಿವೆ, ಮತ್ತೊಮ್ಮೆ ದೇಶ ದೇಶಗಳ ನಡುವೆ space race ಶುರುವಾಗಲು ಕಾರಣವಾದ ’ಚಂದ್ರಯಾನ-೧’ ಯೋಜನೆಯನ್ನು ಹಂತ ಹಂತವಾಗಿ ವಿವರಿಸಲಾಗಿದೆ. ಮಾನವ ಚಂದ್ರನ ಮೇಲೆ ಏಕೆ ಅಷ್ಟು ಆಸಕ್ತಿ ತೋರಿಸುತ್ತಿದ್ದಾನೆ, ಚಂದ್ರನನ್ನು ಎಟುಕಿಸಿಕೊಂಡರೆ ಮನುಕುಲಕ್ಕೆ ಮುಂದೆ ಆಗುವ ಪ್ರಯೋಜನಗಳೇನು ಎಂಬುದಕ್ಕೆ ಇದುವರೆಗೂ ಜನಸಾಮಾನ್ಯರಿಗೆ ಗೊತ್ತೇ ಇರದ ರೋಚಕ ವಿಷಯಗಳಿವೆ. ಜೊತೆಗೆ ಭಾರತದ ಬಾಹ್ಯಾಕಾಶ, ಉಪಗ್ರಹ ಕ್ಷೇತ್ರದ ಹುಟ್ಟು ಬೆಳವಣಿಗೆಗಳ ವಿಷಯಗಳು ಮತ್ತು ವಿಶ್ವದ ಬಾಹ್ಯಾಕಾಶದ ಚಟುವಟಿಕೆಗಳ ವಿಷಯಗಳನ್ನೂ ಒಳಗೊಂಡಿದೆ. ಕೇರಳದ ’ತುಂಬಾ’ ಎಂಬ ಅತೀ ಕುಗ್ರಾಮವೊಂದರಲ್ಲಿ ಒಂದು ಹಳೇ ಚರ್ಚನ್ನೇ ಕಛೇರಿ ಮಾಡಿಕೊಂಡು ದನದ ಕೊಟ್ಟಿಗೆಯಲ್ಲಿ ಜೋಡಣೆ ಮಾಡಿ ಸೈಕಲ್ ನಲ್ಲಿ ಸಾಗಿಸಿ ಭಾರತದ ಮೊಟ್ಟ ಮೊದಲ ರಾಕೆಟನ್ನು ಆಕಾಶಕ್ಕೆ ಯಶಸ್ವಿಯಾಗಿ ಹಾರಿಸಿದ ಘಟನೆಯನ್ನು ಓದುತ್ತಾ ಹೋದಂತೆ ಅಕ್ಷರಶಃ ರೋಮಾಂಚನವಾಗುತ್ತದೆ. ದೇಶಕ್ಕೋಸ್ಕರ ಅಮೆರಿಕದ ಉನ್ನತ ಹುದ್ದೆಗಳನ್ನು ತೊರೆದು ಬಂದ ವಿಜ್ಞಾನಿಗಳು, ಇಸ್ರೋ(ISRO) ಸಂಸ್ಥೆಯ ಹುಟ್ಟು, ಬೆಳವಣಿಗೆ ಎಂತವರಲ್ಲೂ ಆಶ್ಚರ್ಯ, ಹೆಮ್ಮೆ ಮೂಡಿಸದೇ ಇರಲಾರದು. ಬಾಹ್ಯಾಕಾಶದ ಬಗ್ಗೆ ವಿವರಗಳು, ಗಗನಯಾತ್ರೆಯ ಒಳಹೊರಗು, ಅಮೆರಿಕಾ - ರಷ್ಯಾ ಶೀತಲ ಸಮರದಿಂದ ಶುರುವಾದ ಸ್ಪರ್ಧೆ, ಚಂದ್ರನ ಬಗ್ಗೆ ಇರುವ ಕಥೆಗಳು, ನಂಬಿಕೆಗಳು, ಇದಕ್ಕೆ ಸಂಬಂಧಪಟ್ಟ ಜಗತ್ತಿನ ಸ್ವಾರಸ್ಯಕರ ಘಟನೆಗಳು ಮುಂತಾದ ಹಲವು ವಿಷಯಗಳಿಂದ ಪುಸ್ತಕವು ಆಸಕ್ತಿಯಿಂದ ಓದಿಸಿಕೊಂಡು ಹೋಗುತ್ತದೆ.
ಚಂದ್ರಯಾನದಂತಹ ಯೋಜನೆಗಳ ಬಗ್ಗೆ ಜನರಲ್ಲಿ ಆಸಕ್ತಿ, ಗೌರವ ಮೂಡಿಸಲು, ಮಕ್ಕಳನ್ನು, ಯುವಕರನ್ನು ಇಂತಹ ಕ್ಷೇತ್ರಗಳ ಕಡೆಗೆ ಸೆಳೆಯಲು, ಸಂಶೋಧನಾ ಕೆಲಸಗಳ ಬಗ್ಗೆ ಆಸಕ್ತಿ ವಹಿಸುವಂತೆ ಮಾಡಲು ಇಂತಹ ಪುಸ್ತಕಗಳ ಅಗತ್ಯ ಬಹಳ ಇದೆ. ಪ್ರೌಢಶಾಲಾ ಮಟ್ಟದಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರಿಗೂ ಸಹಕಾರಿಯಾಗಬಲ್ಲ, ಅಗತ್ಯವಾಗಿ ಓದಬೇಕಾದ ಪುಸ್ತಕ ಇದು. ಅಬ್ದುಲ್ ಕಲಾಂರವರು ಇದನ್ನು ಮೊದಲೇ ಅನೌಪಚಾರಿಕವಾಗಿ ಬಿಡುಗಡೆ ಮಾಡಿ ಶಭಾಷ್ಗಿರಿ ಕೊಟ್ಟಿದ್ದಾರೆ. ಇಂತಹ ಹೆಚ್ಚು ಹೆಚ್ಚು ಪುಸ್ತಕಗಳು ಬರಲಿ ಎಂದು ಆಸೆ ಪಡೋಣ.
ಇದರ ಜೊತೆಗೆ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಪ್ರತ್ಯಕ್ಷ ದರ್ಶಿ ನೂರು ವರ್ಷಕ್ಕಿಂತಲೂ ಹಿರಿಯರಾದ ಸುಧಾಕರ ಚತುರ್ವೇದಿಯವರಿಂದ ಶಿವಪ್ರಸಾದ್ ಅವರೇ ಬರೆದಿರುವ ’ಜಲಿಯನ್ ವಾಲಾಬಾಗ್’ ಎಂಬ ಪುಸ್ತಕವೂ ಬಿಡುಗಡೆಯಾಯಿತು. ನಾನಿನ್ನೂ ಓದಿಲ್ಲ.
*******************
ಇಷ್ಟೆಲ್ಲಾ ಮಾತಾಡಿ ಈಗ ಟೀವಿನೈನ್ ನಲ್ಲಿ ಅಪ್ಪ ಅಮ್ಮ ನನ್ನನ್ನು ಕಂಡದ್ದು ಹೇಗೆ ಅಂತಲೇ ಹೇಳಲಿಲ್ಲ ಅಲ್ವೇ?
ನಿನ್ನೆ ಚಂದ್ರಯಾನ ಮತ್ತು ಜಲಿಯನ್ ವಾಲಾಬಾಗ್ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಆಗ ಟೀವಿನೈನ್ ಕ್ಯಾಮರಾ ಪ್ರೇಕ್ಷಕರ ಗುಂಪನ್ನು ತೋರಿಸುವಾಗ ಅಲ್ಲೆಲ್ಲೋ ಮಧ್ಯದಲ್ಲಿ ಕೂತಿದ್ದ ನನ್ನನ್ನು ಕೂಡ ಫೋಕಸ್ ಮಾಡಿಬಿಟ್ಟಿದೆ. ಪುಸ್ತಕ ಬಿಡುಗಡೆ ಸುದ್ದಿಯನ್ನು ರಾತ್ರಿ ’ಜಸ್ಟ್ ಬೆಂಗಳೂರು’ ಎಂಬ ಕಾರ್ಯಕ್ರಮದಲ್ಲಿ ತೋರಿಸಿದ್ದಾರೆ. ಮನೆಯಲ್ಲಿ ಅಪ್ಪ ಅಮ್ಮ ಅದನ್ನು ನೋಡುವಾಗ ನಾನೂ ಅವರ ಕಣ್ಣಿಗೆ ಬಿದ್ದಿದ್ದೇನೆ ಅಷ್ಟೆ.
ಫೋನ್ ಮಾಡಿ ಇಷ್ಟು ವಿಷಯ ತಿಳಿದುಕೊಂಡ ನಂತರ ನಿರಾಳವೆನಿಸಿ ನಿದ್ದೆ ಹೋದೆ. :)
ನಿನ್ನೆ ಚಂದ್ರಯಾನ ಮತ್ತು ಜಲಿಯನ್ ವಾಲಾಬಾಗ್ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಆಗ ಟೀವಿನೈನ್ ಕ್ಯಾಮರಾ ಪ್ರೇಕ್ಷಕರ ಗುಂಪನ್ನು ತೋರಿಸುವಾಗ ಅಲ್ಲೆಲ್ಲೋ ಮಧ್ಯದಲ್ಲಿ ಕೂತಿದ್ದ ನನ್ನನ್ನು ಕೂಡ ಫೋಕಸ್ ಮಾಡಿಬಿಟ್ಟಿದೆ. ಪುಸ್ತಕ ಬಿಡುಗಡೆ ಸುದ್ದಿಯನ್ನು ರಾತ್ರಿ ’ಜಸ್ಟ್ ಬೆಂಗಳೂರು’ ಎಂಬ ಕಾರ್ಯಕ್ರಮದಲ್ಲಿ ತೋರಿಸಿದ್ದಾರೆ. ಮನೆಯಲ್ಲಿ ಅಪ್ಪ ಅಮ್ಮ ಅದನ್ನು ನೋಡುವಾಗ ನಾನೂ ಅವರ ಕಣ್ಣಿಗೆ ಬಿದ್ದಿದ್ದೇನೆ ಅಷ್ಟೆ.
ಫೋನ್ ಮಾಡಿ ಇಷ್ಟು ವಿಷಯ ತಿಳಿದುಕೊಂಡ ನಂತರ ನಿರಾಳವೆನಿಸಿ ನಿದ್ದೆ ಹೋದೆ. :)
ಇದಕ್ಕೆ ಚಂದಾದಾರರಾಗಿ:
ಪೋಸ್ಟ್ಗಳು (Atom)
